ಮೂಲ್ಕಿ: ಇಲ್ಲಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಚಿತ್ರನಟ ವಿಜಯ ರಾಘವೇಂದ್ರ ಅವರು ಕುಟುಂಬ ಸಹಿತ ಶನಿವಾರ ಭೇಟಿ ನೀಡಿ, ಸೀರೆ ಕಾಣಿಕೆ ಸಮರ್ಪಿಸಿದರು. ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯ ರಾಘವೇಂದ್ರ ಜೊತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಬಳಿಕ ಅವರು ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಇದ್ದರು. ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯ ರಾಘವೇಂದ್ರ ಭೇಟಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.