ಬೆಂಗಳೂರು: ಚಿರಂಜೀವಿ ಸರ್ಜಾ ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲಾಗುತ್ತಿಲ್ಲ- ಟ್ವಿಟರ್ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ಚಿರು ಸಾವಿನ ಸುದ್ದಿಗೆ ಹಲವಾರು ಮಂದಿ ಪ್ರತಿಕ್ರಿಯಿಸಿದ್ದು ಹೀಗೆ.
ಚಿರಂಜೀವಿ ಸರ್ಜಾ ಸಾವಿನ ಸುದ್ದಿಗೆ ಪ್ರತಿಕ್ರಿಯಿಸಿದ ನಟ ದರ್ಶನ್ ತೂಗುದೀಪ ವಿಧಿ ನಿಜವಾಗಿಯೂ ತುಂಬಾ ಕ್ರೂರ ಎಂದು ಟ್ವೀಟಿಸಿದ್ದಾರೆ.
ಚಿರಂಜೀವಿ ಸರ್ಜಾ ಅವರ ನಿಧನ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ಯುವ ಪ್ರತಿಭೆಯೊಬ್ಬರು ಬೇಗನೆ ಅಗಲಿದರು. ನನ್ನ ಸಂತಾಪಗಳು ಎಂದು ಅನಿಲ್ ಕುಂಬ್ಳೆ ಟ್ವೀಟಿಸಿದ್ದಾರೆ.
ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು. ಅವರ ನಗು ಮುಖ ಮರೆಯಲಾಗುವುದಿಲ್ಲ - ಪ್ರಿಯಾಮಣಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.