ADVERTISEMENT

ಕಾರು ತಾಗಿದ್ದ ಪ್ರಕರಣ: ಕಾರ್ಮಿಕನನ್ನು ಮನೆಗೆ ಕರೆದು ಕ್ಷಮೆ ಕೇಳಿದ ರಚಿತಾ ರಾಮ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2023, 13:43 IST
Last Updated 15 ಆಗಸ್ಟ್ 2023, 13:43 IST
   

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ನಟಿ ರಚಿತಾ ರಾಮ್‌ ಸೋಮವಾರ ಆಗಮಿಸಿದ್ದರು. ಈ ವೇಳೆ ಅವರ ಕಾರು, ಸ್ವಚ್ಚತಾ ಕಾರ್ಮಿಕರೊಬ್ಬರಿಗೆ ತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿರಲಿಲ್ಲ.

ಆದಾಗ್ಯೂ, ರಚಿತಾ ರಾಮ್‌ ಕಾರು ಕಾರ್ಮಿಕನಿಗೆ ಗುದ್ದಿದೆ ಎಂಬ ಹಲವು ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದವು.

ಲಾಲ್‌ಬಾಗ್‌ನಲ್ಲಿ ಕೆಲಸ ಮಾಡುವ ರಂಗಪ್ಪ ಎನ್ನುವವರಿಗೆ ರಚಿತಾ ಇದ್ದ ಕಾರು ತಾಗಿತ್ತು.

ADVERTISEMENT

ಈ ಸಂಬಂಧ ಪ್ರತಿಕ್ರಿಯಿಸಿರುವ ನಟಿ ರಚಿತಾ ರಾಮ್‌, ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊದಲ್ಲಿ ರಂಗಪ್ಪ ಅವರಲ್ಲಿ ಕ್ಷಮೆ ಕೇಳುವ ರಚಿತಾ, ಇನ್ನುಮುಂದೆ ಹೀಗಾಗದಂತೆ ಎಚ್ಚರ ವಹಿಸುವುದಾಗಿ ತಿಳಿಸಿದ್ದಾರೆ.

ರಚಿತಾ ರಾಮ್ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.