ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ಕುಮಾರ್ ಮನೆಗೆ ನಟ ಅಲ್ಲು ಅರ್ಜುನ್ ಇಂದು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪುನೀತ್ ಅವರ ಸದಾಶಿವನಗರದ ಮನೆಗೆ ಅಲ್ಲು ಅರ್ಜುನ್ ಶಿವರಾಜ್ ಕುಮಾರ್ ಜೊತೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಲಿದ್ದಾರೆ.
ಬಳಿಕ ಪುನೀತ್ ಸಮಾಧಿಗೆ ತೆರಳಿ ನಮನ ಸಲ್ಲಿಸಲಿದ್ದಾರೆ.ಪುನೀತ್ ಅವರ ಜೊತೆ ಆತ್ಮೀಯ ಒಡನಾಟವನ್ನು ಹೊಂದಿದ್ದ ಅಲ್ಲು ಅರ್ಜುನ್ ಪುನೀತ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದರು.
ಪುನೀತ್ ನಿಧನಾನಂತರ ಈ ಹಿಂದೆ ಅಲ್ಲು ಅರ್ಜುನ್ ಅವರು ಬೆಂಗಳೂರಿಗೆ ಪುಷ್ಪ ಸಿನಿಮಾ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ, ಮನೆಗೆ ಭೇಟಿ ನೀಡಿರಲಿಲ್ಲ. ‘ಪುಷ್ಪ ಪ್ರಚಾರದ ವೇಳೆ ಮನೆಗೆ ಹೋದರೆ ಪ್ರಚಾರ ಪಡೆಯಲು ಈ ರೀತಿ ಮಾಡಿದರು ಎಂಬ ಅಪವಾದಗಳು ಬರುತ್ತವೆಂದು ನಾನು ಮನೆಗೆ ಭೇಟಿ ನೀಡಿಲ್ಲ. ಅದಕ್ಕೋಸ್ಕರ ಮತ್ತೊಮ್ಮೆ ಬೆಂಗಳೂರಿಗೆ ಬರುವೆ’ ಎಂದು ಅಲ್ಲು ಅರ್ಜುನ್ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.