ADVERTISEMENT

ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ: ನಿರೂಪಕಿ ಅನುಶ್ರೀ

ಡ್ರಗ್ಸ್ ಮಾಫಿಯಾ: ಫೇಸ್‌ಬುಕ್‌ನಲ್ಲಿ ಕಣ್ಣೀರು 

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 5:14 IST
Last Updated 2 ಅಕ್ಟೋಬರ್ 2020, 5:14 IST
ನಟಿ, ನಿರೂಪಕಿ ಅನುಶ್ರೀ
ನಟಿ, ನಿರೂಪಕಿ ಅನುಶ್ರೀ    

ಮಂಗಳೂರು: ನನ್ನನ್ನು ಬೆಳೆಸಿದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿರುವ ಅವರು, ಸೆ. 24 ನನ್ನ ಜೀವನದ ಯಾವ ಘಟ್ಟದಲ್ಲೂ ನೆನಪಿಸಿಕೊಳ್ಳಲು ಇಷ್ಟಪಡದಿರುವ ದಿನ ಎಂದಿದ್ದಾರೆ.

ಸಿಸಿಬಿ ವಿಚಾರಣೆಗೆ ಕರೆದಿರುವುದಕ್ಕೆ ಬೇಸರವಿಲ್ಲ. ಆದರೆ, ಅದರ ನಂತರ ಆರಂಭವಾಗಿರುವ ಅಂತೆ ಕಂತೆಗಳಿಂದ ನನ್ನ ಕುಟುಂಬಕ್ಕೆ ಸಾಕಷ್ಟು ನೋವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.
ದಯವಿಟ್ಟು ಈ ರೀತಿಯ ಸುದ್ದಿಗಳನ್ನು ಮಾಡುವ ಮೊದಲು ನನ್ನ ಕುಟುಂಬದವರ ಬಗ್ಗೆ‌ಒಮ್ಮೆ ಯೋಚಿಸಿ. ಅದಾಗ್ಯೂ ನನ್ನ ಬೆಂಬಲಕ್ಕೆ ನಿಂತಿರುವ ಎಲ್ಲರಿಗೂ ಕೃತಜ್ಞತೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.