ಅತ್ಯುತ್ತಮ ಹಿಂದಿ ಚಲನಚಿತ್ರ ರಾಷ್ಟ್ರೀಯ ಪ್ರಶಸ್ತಿ ಪಡೆದ‘ಅಂಧಾಧುನ್’ ರಿಮೇಕ್ ಹಕ್ಕಿನ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.2018ರ ಅಕ್ಟೋಬರ್ನಲ್ಲಿ ಬಿಡುಗಡೆಯಾದ ಚಿತ್ರದ ಬಗ್ಗೆಉತ್ತಮ ವಿಮರ್ಶೆ ಹಾಗೂ ಪ್ರಶಂಸೆಯ ಮಾತುಗಳು ಕೇಳಿಬಂದಿದ್ದವು. ಈಗ ಪ್ರಶಸ್ತಿ ಪ್ರಕಟವಾದ ನಂತರ ಈ ಚಿತ್ರದ ರಿಮೇಕ್ಗೆ ಬೇಡಿಕೆ ಹೆಚ್ಚಾಗಿದೆ.
‘ಅಂಧಾಧುನ್’ ಚಿತ್ರವನ್ನು ಶ್ರೀರಾಮ್ ರಾಘವನ್ ನಿರ್ದೇಶನ ಮಾಡಿದ್ದಾರೆ. ಚಿತ್ರಕತೆಯೂ ಅವರದೇ. ಕೆ.ಯು ಮೋಹನನ್ ಅವರ ಸಿನಿಮಾಟೋಗ್ರಫಿಗೆ ಪ್ರಶಂಸೆ ವ್ಯಕ್ತವಾಗಿತ್ತು.5ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರವು ಅತ್ಯುತ್ತಮ ಹಿಂದಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕತೆ ಪ್ರಶಸ್ತಿಗಳನ್ನು ಗೆದ್ದಿದೆ.ಇದರಲ್ಲಿ ಪ್ರಮುಖ ಪಾತ್ರದಲ್ಲಿ ಆಯುಷ್ಮಾನ್ ಖುರಾನಾ, ರಾಧಿಕಾ ಆಪ್ಟೆ ಹಾಗೂ ತಬು ನಟಿಸಿದ್ದು, ಕ್ರೈಂ ಥ್ರಿಲ್ಲರ್ ಸಿನಿಮಾ.
ಈ ಚಿತ್ರದ ರಿಮೇಕ್ ಹಕ್ಕು ಪಡೆಯಲು ತುಂಬಾ ಜನ ನಿರ್ಮಾಪಕರು ಕಾಯುತ್ತಿದ್ದರು. ಈಗ ತಮಿಳು ನಿರ್ಮಾಪಕ ತ್ಯಾಗರಾಜನ್ ಅವರು ತಮಿಳು ರಿಮೇಕ್ ಹಕ್ಕನ್ನು ಪಡೆದುಕೊಂಡಿದ್ದಾರೆ. ಅವರ ಮಗ ಪ್ರಶಾಂತ್ ರಿಮೇಕ್ ಸಿನಿಮಾದಲ್ಲಿ ಆಯುಷ್ಮಾನ್ ಮಾಡಿದ ಪಾತ್ರವನ್ನು ನಿರ್ವಹಿಸಲಿದ್ದಾರಂತೆ. ಈ ಚಿತ್ರದ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.
ಇನ್ನು ಈ ಚಿತ್ರ ತೆಲುಗಿನಲ್ಲಿಯೂ ರಿಮೇಕ್ ಆಗಲಿದ್ದು, ಪ್ರಮುಖ ಪಾತ್ರದಲ್ಲಿ ನಾಣಿ ನಟಿಸಲಿದ್ದಾರೆ ಎನ್ನಲಾಗಿದೆ. ಅವರು ಸದ್ಯ ‘ಗ್ಯಾಂಗ್ಲೀಡರ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 13ರಂದು ಬಿಡುಗಡೆಯಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.