ADVERTISEMENT

ಕೋವಿಡ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದವರಿಗೆ ಅನುಷ್ಕಾ ಶರ್ಮಾ ಧನ್ಯವಾದ

​ಪ್ರಜಾವಾಣಿ ವಾರ್ತೆ
Published 14 ಮೇ 2021, 12:45 IST
Last Updated 14 ಮೇ 2021, 12:45 IST
ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ
ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ   

ನವದೆಹಲಿ: ಕೋವಿಡ್ ಪರಿಹಾರ ನಿಧಿ ಸಂಗ್ರಹ ಅಭಿಯಾನ ಬೆಂಬಲಿಸಿ ದೇಣಿಗೆ ನೀಡಿದವರಿಗೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಧನ್ಯವಾದ ಹೇಳಿದ್ದಾರೆ.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಮೇ 7ರಂದು ನಿಧಿ ಸಂಗ್ರಹ ಅಭಿಯಾನದ ಬಗ್ಗೆಘೋಷಿಸಿದ್ದರು. ಒಟ್ಟು ₹ 7 ಕೋಟಿ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, ₹11 ಕೋಟಿಗೂ ಹೆಚ್ಚು ಮೊತ್ತ ಸಂಗ್ರಹವಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಅನುಷ್ಕಾ, ‘ನೀವೆಲ್ಲರೂ ತೋರಿದ ಒಗ್ಗಟ್ಟಿನ ಮನೋಭಾವದಿಂದ ನಿಜಕ್ಕೂ ಚಕಿತರಾಗಿದ್ದೇವೆ. ನಾವು ಆರಂಭದಲ್ಲಿ ನಿಗದಿಪಡಿಸಿದ್ದ ಗುರಿಗಿಂತಲೂ ಹೆಚ್ಚಿನ ಮೊತ್ತ ಸಂಗ್ರಹವಾಗಿದೆ ಮತ್ತು ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಬಹುದೂರ ಸಾಗಲಿದ್ದೇವೆ ಎಂಬುದನ್ನು ಘೊಷಿಸಲು ಹೆಮ್ಮೆಯಾಗುತ್ತಿದೆ. ದೇಶದ ಜನರಿಗೆ ಸಹಾಯ ಮಾಡುವಲ್ಲಿ ನಿಮ್ಮ ಅಗಾಧ ಬೆಂಬಲಕ್ಕೆ ಧನ್ಯವಾದಗಳು’ ಎಂದು ಉಲ್ಲೇಖಿಸಿದ್ದಾರೆ.

ಒಟ್ಟು ₹11,39,11,820 ಸಂಗ್ರಹವಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಸಂಗ್ರಹವಾದ ಮೊತ್ತವನ್ನು ಆ್ಯಕ್ಟ್ ಗ್ರ್ಯಾಂಟ್ಸ್‌ ಸಂಸ್ಥೆಗೆ ನೀಡಲಾಗುತ್ತದೆ. ಈ ಸಂಸ್ಥೆಯು ಆಮ್ಲಜನಕ, ವೈದ್ಯರ ಸೇವೆ, ಲಸಿಕೆ ಕುರಿತು ಜಾಗೃತಿ ಹಾಗೂ ಟೆಲಿ ಮೆಡಿಸಿನ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.