ADVERTISEMENT

ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾದಲ್ಲಿ ಬಿಯರ್‌ ಬಾಟಲ್‌ ಹಿಡಿದ ಆಶಿಕಾ ರಂಗನಾಥ್

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 9:16 IST
Last Updated 31 ಜನವರಿ 2021, 9:16 IST
ಆಶಿಕಾ ರಂಗನಾಥ್‌
ಆಶಿಕಾ ರಂಗನಾಥ್‌   

ನಟಿ ಆಶಿಕಾ ರಂಗನಾಥ್‌ ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಬಿಯರ್‌ ಬಾಟಲ್‌ ಹಿಡಿದು ಪೋಸ್‌ ಕೊಟಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.ಮೇ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಸಾಕಷ್ಟು ಚಿತ್ರಗಳಿಗೆ ಸಂಭಾಷಣೆ ಬರೆದಿರುವ ‘ದಿಲ್ ವಾಲ’, ‘ಶಕ್ತಿ’, ‘ರಾಂಬೋ 2’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಅನಿಲ್ ಕುಮಾರ್ ಅವರು ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಇದು ಇವರ ಏಳನೇಯ ಚಿತ್ರ. ಕಥೆ, ಚಿತ್ರಕಥೆ ಹಾಗೂ ಸಭಾಷಣೆಯನ್ನು ಅನಿಲ್‌ ಕುಮಾರ್‌ ನಿಭಾಯಿಸಿದ್ದಾರೆ.

ADVERTISEMENT

ಬೆಂಗಳೂರು, ಮೈಸೂರು ಹಾಗೂ ಬ್ಯಾಂಕಾಕ್‌ನಲ್ಲಿ ಸುಮಾರು 60 ದಿನಗಳ ಚಿತ್ರೀಕರಣ ನಡೆದಿದೆ. ಆಶಿಕಾ ರಂಗನಾಥ್ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಯಾರದೇ ಸ್ವಭಾವವನ್ನು ಅವರ ವೇಷಭೂಷಣದಿಂದ ನಿರ್ಧರಿಸಲು ಸಾಧ್ಯವಿಲ್ಲ. ಅವರ‌‌ ವೇಷಭೂಷಣವೇ ಬೇರೆ, ಸ್ವಭಾವವೇ ಬೇರೆ ಎಂಬುದನ್ನು ಆಶಿಕಾ ರಂಗನಾಥ್ ನಿರ್ವಹಿಸಿರುವ ಪಾತ್ರದ ಮೂಲಕ ತೋರಿಸಲಾಗಿದೆ ಎನ್ನುವುದು ನಿರ್ದೇಶಕರ ಸಮಜಾಯಿಷಿ.

ರಂಗಾಯಣ ರಘು, ರವಿಶಂಕರ್, ತಬಲಾ ನಾಣಿ, ಚಿಕ್ಕಣ್ಣ, ತಿಲಕ್ ಮುಂತಾದ ಕಲಾವಿದರ ತಾರಾಬಳಗ ಈ ಚಿತ್ರದಲ್ಲಿದೆ.

ಓದಿ:

ಅರ್ಜುನ್ ಜನ್ಯ ಸಂಗೀತ, ಶಿವಕುಮಾರ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಏಜೆ ಟಾಕೀಸ್ ಹಾಗೂ ಬಿಲ್ವ ಎಂಟರ್‌ಟೈನ್‌‌ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.