ADVERTISEMENT

ಕೆಜಿಎಫ್ ಚಾಪ್ಟರ್‌ 2: ತಿರುಪತಿ, ಸಿಂಹಾಚಲಂ ದೇಗುಲಗಳಿಗೆ ಯಶ್ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2022, 5:59 IST
Last Updated 12 ಏಪ್ರಿಲ್ 2022, 5:59 IST
ಯಶ್ (ಐಎಎನ್‌ಎಸ್ ಸಂಗ್ರಹ ಚಿತ್ರ)
ಯಶ್ (ಐಎಎನ್‌ಎಸ್ ಸಂಗ್ರಹ ಚಿತ್ರ)   

ಬೆಂಗಳೂರು: ‘ಕೆಜಿಎಫ್ ಚಾಪ್ಟರ್‌ 2’ ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಲು ನಟ ಯಶ್ ಅವರು ಅನೇಕ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.

ಆಂಧ್ರ ಪ್ರದೇಶ ಪ್ರವಾಸದ ವೇಳೆ ಅವರು ಸೋಮವಾರ ತಿರುಪತಿ ವೆಂಕಟೇಶ್ವರ ದೇಗುಲ ಹಾಗೂ ವಿಶಾಖಪಟ್ಟಣದ ಸಿಂಹಾಚಲಂ ದೇಗುಲಕ್ಕೆ ಬೇಟಿ ನೀಡಿದ್ದಾರೆ.

ಇದೇ 14ರಂದು ಸಿನಿಮಾ ತೆರೆಗೆ ಬರಲಿದ್ದು, ಅದ್ದೂರಿ ಬಿಡುಗಡೆಗೆ ಸಿದ್ಧತೆ ಭರದಿಂದ ಸಾಗಿದೆ. ಸಿನಿಮಾವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಏಪ್ರಿಲ್ 10ರಂದು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ಚಿತ್ರತಂಡ ಸಮೇತ ಭೇಟಿ ನೀಡಿದ್ದ ಯಶ್, ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಹೇಳಿದ್ದರು.

ಕೆಜಿಎಫ್ ಚಾಪ್ಟರ್‌ 2 ಬಿಡುಗಡೆಯ ಕಾರಣ ಶಾಹಿದ್‌ ಕಪೂರ್‌ ನಟನೆಯ ‘ಜೆರ್ಸಿ’ ಬಿಡುಗಡೆ ದಿನಾಂಕವನ್ನು ಏಪ್ರಿಲ್ 22ಕ್ಕೆ ಮುಂದೂಡಲಾಗಿದೆ ಎಂದು ನಿರ್ಮಾಪಕ ಅಮನ್ ಗಿಲ್ ಸೋಮವಾರ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.