ADVERTISEMENT

ಬೆಂಗಳೂರು ಚಲನಚಿತ್ರೋತ್ಸವ: ರಾಜ್ಯ ಚಲನಚಿತ್ರ ಪ್ರಶಸ್ತಿ ಪುನರಾರಂಭ –ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 14:32 IST
Last Updated 29 ಫೆಬ್ರುವರಿ 2024, 14:32 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: 2019ರಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಯನ್ನು ಪುನರಾರಂಭಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಹೇಳಿದರು.

ವಿಧಾನಸೌಧದ ಪೂರ್ವ ದ್ವಾರದ ಮುಂಭಾಗದಲ್ಲಿ ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ನಡೆಯಿತು.

ADVERTISEMENT

ಪ್ರಶಸ್ತಿಗೆ ಸಂಬಂಧಿಸಿದ ಸಮಿತಿಗಳನ್ನು ಮಾಡಿದ್ದು ಇವುಗಳು ವರದಿ ನೀಡಿದ ತಕ್ಷಣ, ಪ್ರಶಸ್ತಿ ಸ್ಥಗಿತಗೊಂಡಿರುವ ವರ್ಷದಿಂದ ಹಿಡಿದು ಇಲ್ಲಿಯವರೆಗಿನ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.