ಮೈಸೂರು: ಗಾಯಕ ಚಂದನ್ಶೆಟ್ಟಿ ಅವರು ಸೋಮವಾರ ಬಿಗ್ಬಾಸ್ ಸ್ಪರ್ಧಿ ನಿವೇದಿತಾ ಗೌಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರು.
ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ನಿಶ್ಚಿತಾರ್ಥ ಸಮಾರಂಭನಡೆಯಿತು. ಎರಡು ಕುಟುಂಬಗಳ ಸದಸ್ಯರು, ಬಂಧುಬಳಗದವರು ಹಾಗೂ ಆಪ್ತ ಗೆಳೆಯರು ಮಾತ್ರ ಹಾಜರಿದ್ದರು.
ದಸರಾ ಹಬ್ಬದ ಸಂದರ್ಭದಲ್ಲಿಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಇದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಂದನ್ ಶೆಟ್ಟಿ ರಾಜ್ಯದ ಜನರಲ್ಲಿ ಕ್ಷಮೆ ಕೋರಿದ್ದರು.
ಬಿಗ್ಬಾಸ್ 5ರಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ಪರ್ಥಿಗಳಾಗಿದ್ದರು. ಈ ವೆಳೆ ಅವರಲ್ಲಿ ಪ್ರೇಮಾಂಕುರವಾಗಿತ್ತು.
ಇದನ್ನೂ ಓದಿ:ಗಾಯಕ ಚಂದನ್ಶೆಟ್ಟಿ ವಿರುದ್ಧ 4 ದೂರುಗಳು ದಾಖಲು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.