‘ಲವ್ ಬರ್ಡ್ಸ್’, ‘ಬ್ಯಾಡ್’ ಸಿನಿಮಾ ಬಳಿಕ ಪಿ.ಸಿ.ಶೇಖರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಹೊಸ ಸಿನಿಮಾದ ಶೀರ್ಷಿಕೆಯನ್ನು ನಟ ಶಿವರಾಜ್ಕುಮಾರ್ ಇತ್ತೀಚೆಗೆ ಅನಾವರಣಗೊಳಿಸಿದರು.
‘ಮಹಾನ್’ ಎಂಬ ಶೀರ್ಷಿಕೆಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ ರಾಘವೇಂದ್ರ ನಟಿಸಲಿದ್ದಾರೆ. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
‘ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ. ಹಾಗಾಗಿ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತವೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ. ಚಿತ್ರದಲ್ಲಿ ಮನರಂಜನೆಯ ಜೊತೆಗೆ ಸಂದೇಶವೂ ಇದೆ’ ಎಂದಿದ್ದಾರೆ ಪಿ.ಸಿ.ಶೇಖರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.