ADVERTISEMENT

ಪ್ರಶಸ್ತಿ ಬಾಚಿದ ‘ದಾರಿ ಯಾವುದಯ್ಯಾ ವೈಕುಂಠಕೆ’

ರಾಜಸ್ಥಾನ ಅಂತರರಾಷ್ಟ್ರೀಯ ಚಿತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 11:39 IST
Last Updated 30 ಮಾರ್ಚ್ 2021, 11:39 IST
ರಾಜಸ್ಥಾನ ಅಂತರರಾಷ್ಟ್ತೀಯ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರದ ನಿರ್ದೇಶಕ  ಸಿದ್ದು ಪೂರ್ಣಚಂದ್ರ
ರಾಜಸ್ಥಾನ ಅಂತರರಾಷ್ಟ್ತೀಯ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರದ ನಿರ್ದೇಶಕ  ಸಿದ್ದು ಪೂರ್ಣಚಂದ್ರ   

ರಾಜಸ್ಥಾನದ ಜೋಧಪುರದಲ್ಲಿ ನಡೆದ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರದ ಕಥೆಗೆ ಉತ್ತಮ ಕಥೆ ಪ್ರಶಸ್ತಿ ಸಿಕ್ಕಿದೆ. ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಚಿತ್ರಕ್ಕೆ ವಿವಿಧ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ 30ಕ್ಕೂ ಹೆಚ್ಚು ಪ್ರಶಸ್ತಿಗಳು ಸಿಕ್ಕಿವೆ. ನಾಲ್ಕು ಕಡೆ ‘ಉತ್ತಮ ನಿರ್ದೇಶನ’ ಪ್ರಶಸ್ತಿ ಸಿಕ್ಕಿದೆ.

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ. ಕೊಟಗಿ ಅವರು ಈ ಚಿತ್ರ ನಿರ್ಮಿಸಿದ್ದಾರೆ. ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನುಷಾ, ‘ತಿಥಿ’ ಚಿತ್ರದ ಖ್ಯಾತಿ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್ ಮುಂತಾದವರಿದ್ದಾರೆ.

ADVERTISEMENT

ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.