ಬೆಂಗಳೂರು: ಜೈಲಿನಿಂದ ಹೊರ ಬಂದ ಮೇಲೆ ನಟ ದರ್ಶನ್ ಅವರು ಅಭಿಮಾನಿಗಳಿಗಾಗಿ ವಿಡಿಯೊ ಸಂದೇಶವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಫೆಬ್ರುವರಿ 16ರಂದು ದರ್ಶನ್ ಜನ್ಮದಿನ. ಈ ವರ್ಷ ಅವರು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಎಲ್ಲ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ. ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಕಡಿಮೆ. ಈಗ ನಾನು ಯಾಕೆ ನಾನು ಕ್ಯಾಮೆರಾ ಮುಂದೆ ಬಂದೆ ಎಂದರೆ ಅದು ನನ್ನ ನನ್ನ ಬರ್ತ್ಡೇ ವಿಚಾರವಾಗಿ..
'ನಿಮ್ಮನ್ನು ಭೇಟಿಯಾಗಬೇಕೆಂದು ನನಗೂ ಆಸೆ ಇತ್ತು. ನೀವೂ ಆಸೆ ಪಟ್ಟಿದ್ರಿ. ಈ ಬಾರಿ ಸಮಸ್ಯೆಯೇನೆಂದರೆ, ದೊಡ್ಡ ಸಮಸ್ಯೆ ಅಂತ ಹೇಳ್ತಿಲ್ಲ. ಒಂದೇ ಒಂದು ಸಮಸ್ಯೆ ಅಂದರೆ ಅದು ನನ್ನ ಆರೋಗ್ಯ ವಿಚಾರ. ನನಗೆ ಬೆನ್ನು ನೋವು ಇದೆ. ತುಂಬಾ ಹೊತ್ತು ನಿಂತುಕೊಳ್ಳಲು ಆಗಲ್ಲ. ಹಾಗಾಗಿ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕ್ಷಮೆ ಇರಲಿ'
ಇಂತಿ ನಿಮ್ಮ ದಾಸ ದರ್ಶನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.