
ದರ್ಶನ್, ವಿಜಯಲಕ್ಷ್ಮಿ ದರ್ಶನ್
ಚಿತ್ರ: ಇನ್ಸ್ಟಾಗ್ರಾಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
‘ನನ್ನ ಪ್ರೀತಿಯ ಸೆಲೆಬ್ರಿಟಿಗಳೇ,
ನಾನು ನಿಮಗೆ ಹೇಳಲು ಬಯಸುವುದೇನೆಂದರೆ, ದಯವಿಟ್ಟು ಜನರು ಏನು ಹೇಳಿದರೂ ಚಿಂತಿಸಬೇಡಿ. ಯಾವುದೇ ವದಂತಿಗಳನ್ನು ನಂಬಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ’.
‘ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಆಗಿದ್ದೀರಿ. ನಾನು ಬಯಸುವುದು ನಿಮ್ಮ ಆ ಪ್ರೀತಿ ಮತ್ತು ಶಕ್ತಿಯನ್ನು ನಮ್ಮ ಡೆವಿಲ್ ಸಿನಿಮಾದ ಕಡೆಗೆ ಹರಿಸಬೇಕು. ನಿಮ್ಮೆಲ್ಲರಿಂದಾಗಿ ನಾನು ನಾನಾಗಿ ಬದುಕಿದ್ದೇನೆ’.
‘ನನ್ನ ಅನುಪಸ್ಥಿತಿಯಲ್ಲಿ ನೀವಿದ್ದೀರಿ, ನಿಮ್ಮ ಪ್ರಚಾರಗಳು, ನಿಮ್ಮ ಸಮರ್ಪಣೆ, ನಿಮ್ಮ ಏಕತೆ ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಎನಿಸುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿಯವರೆಗೆ ನಿಮ್ಮ ಪ್ರೀತಿಯನ್ನು ಅಚಲವಾಗಿ ಇರಿಸಿ’.
‘ನಿಮ್ಮ ದಾಸ ದರ್ಶನ’ ಎಂದು ಜೈಲಿನಿಂದಲೇ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.