ADVERTISEMENT

‘ಎದ್ದೇಳು ಮಂಜುನಾಥಾ–2’: ನಿರ್ದೇಶನದೊಂದಿಗೆ ಬಣ್ಣಹಚ್ಚಿದ ಗುರುಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 11:10 IST
Last Updated 9 ಮಾರ್ಚ್ 2022, 11:10 IST
ಗುರುಪ್ರಸಾದ್‌
ಗುರುಪ್ರಸಾದ್‌   

‘ಎದ್ದೇಳು ಮಂಜುನಾಥಾ’ ಎಂದಾಕ್ಷಣ ನೆನಪಾಗುವುದು ನವರಸ ನಾಯಕ ಜಗ್ಗೇಶ್‌ ಅವರ ನಟನೆ ಹಾಗೂ ನಿರ್ದೇಶಕ ಗುರುಪ್ರಸಾದ್‌ ಅವರ ನಿರ್ದೇಶನ. ಇದೀಗ ಈ ಚಿತ್ರದ ಎರಡನೇ ಭಾಗ ಸೆಟ್ಟೇರಿದೆ. ಆದರೆ ಜಗ್ಗೇಶ್‌ ಅವರು ಎರಡನೇ ಭಾಗದಲ್ಲಿಲ್ಲ. ಬದಲಾಗಿ ನಿರ್ದೇಶನದೊಂದಿಗೆ ಪ್ರಮುಖ ಪಾತ್ರದಲ್ಲಿ ಗುರುಪ್ರಸಾದ್‌ ಅವರೇ ನಟಿಸಿದ್ದಾರೆ.

ಏಪ್ರಿಲ್‌ನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ರಚಿತಾ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ. ಶರತ್ ಲೋಹಿತಾಶ್ವ, ಶಶಿಧರ್, ರವಿ ದೀಕ್ಷಿತ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

‘ಎದ್ದೇಳು ಮಂಜುನಾಥಾ’ ಚಿತ್ರದ ಸಮಯದಲ್ಲೇ ಸಿದ್ಧವಾದ ಕಥೆಯಿದು. ಚಿತ್ರ ನಿರ್ಮಾಣವಾಗಲು ಹತ್ತು ವರ್ಷ ಬೇಕಾಯಿತು. ಇದು ಲಾಕ್‌ಡೌನ್ ಸಮಯದಲ್ಲಿ ಚಿತ್ರೀಕರಣವಾದ ಚಿತ್ರ. ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ಮಾಪಕ ಶಶಿಧರ್ ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದಾರೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲಿದ್ದೇವೆ. ಕಾಮಿಡಿ ಕ್ರೈಂ ಆಧಾರಿತ ಚಿತ್ರವಿದು. ಕ್ರೈಂ ಎಂದರೆ ಬರೀ ರಕ್ತದೋಕುಳಿ ಅಲ್ಲ. ಬೇರೊಂದು ರೀತಿಯಲ್ಲಿ ಹೇಳಬಹುದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುತ್ತಾರೆ ಗುರುಪ್ರಸಾದ್‌.

ADVERTISEMENT

‘ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮನೋಹರ್ ಜೋಶಿ, ಸಿನಿಟಿಕ್ ಸೂರಿ, ವೇಲ್ ಮುರುಗನ್, ಅಶೋಕ್ ಸೇರಿ ನಾಲ್ಕು ಜನ ಛಾಯಾಗ್ರಾಹಕರು. ಏಪ್ರಿಲ್ ಅಂತ್ಯದಲ್ಲಿ ಒಟಿಟಿ ಅಥವಾ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.