ADVERTISEMENT

ಮೈಸೂರಿನಲ್ಲಿ ‘ಹೊಯ್ಸಳ’ನಾರ್ಭಟ! ಡಾಲಿ ಧನಂಜಯ್ 25 ನೇ ಚಿತ್ರ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 11:31 IST
Last Updated 4 ಜುಲೈ 2022, 11:31 IST
ಡಾಲಿ ಧನಂಜಯ್
ಡಾಲಿ ಧನಂಜಯ್   

ನಟ ‘ಡಾಲಿ’ ಧನಂಜಯ್‌ ನಟನೆಯ 25ನೇ ಸಿನಿಮಾ ‘ಹೊಯ್ಸಳ’ದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಈ ನಡುವೆ ಚಿತ್ರತಂಡವು ಧನಂಜಯ್‌ ಅವರ ಫಸ್ಟ್‌ಲುಕ್‌ ಬಿಡುಗಡೆಗೊಳಿಸಿದೆ.

ಧನಂಜಯ್‌, ಈ ಚಿತ್ರದಲ್ಲಿ ‘ಗುರುದೇವ ಹೊಯ್ಸಳ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕೆ ವಿಜಯ್ ನಾಗೇಂದ್ರ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ ‘ಗೀತಾ’ ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ಧನಂಜಯ್‌, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ಇಲ್ಲಿ ನಡೆಯಲಿದೆ. ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ಹೆಣೆದಿರುವ ಕಥೆ ಇದಾಗಿದೆ ಎಂದಿದೆ ಚಿತ್ರತಂಡ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.