ADVERTISEMENT

ಮುಕ್ತಾಯದ ಹಂತದಲ್ಲಿ ‘ದ್ರೋಣ’

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2019, 19:30 IST
Last Updated 18 ಏಪ್ರಿಲ್ 2019, 19:30 IST
ಶಿವರಾಜ್ ಕುಮಾರ್
ಶಿವರಾಜ್ ಕುಮಾರ್   

ಶಿವರಾಜ್ ಕುಮಾರ್ ಅಭಿನಯದ ‘ದ್ರೋಣ’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದೆ ಎನ್ನುವ ಸುದ್ದಿ ನೀಡಿದೆ ಚಿತ್ರತಂಡ. ಈ ಸಿನಿಮಾವನ್ನು ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್ ಬಿ., ಸಂಗಮೇಶ.ಬಿ., ಶೇಶು ಚಕ್ರವರ್ತಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಚಿತ್ರದ ಒಂದು ಹಾಡು ಹಾಗೂ ಕೆಲವು ಸನ್ನಿವೇಶಗಳ ಚಿತ್ರೀಕರಣ ಶುಕ್ರವಾರದಿಂದ (ಏಪ್ರಿಲ್ 19) ನಡೆಯಲಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಪ್ರಮೋದ್ ಚಕ್ರವರ್ತಿ ಅವರದ್ದು. ಜೆ.ಎಸ್. ವಾಲಿ ಛಾಯಾಗ್ರಹಣ, ರಾಮ್‍ ಕ್ರಿಶ್ ಸಂಗೀತ ಈ ಚಿತ್ರಕ್ಕಿದೆ.

ವಿ. ಮನೋಹರ್ ಮತ್ತು ಡಾ. ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಾಹಿತ್ಯ ನೀಡಿದ್ದಾರೆ. ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾ ದಾಸ್, ರಾಮಸ್ವಾಮಿ ಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾಸ್ಟರ್ ಮಹೇಂದ್ರ ಹಾಗೂ ರವಿಕಿಶನ್ ತಾರಾಗಣದಲ್ಲಿ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.