ಬೆಂಗಳೂರು: ನಿನ್ನೆ ಮಧ್ಯರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದ ಗಾಳಿಸುದ್ದಿಗೆ ಖುದ್ದಾಗಿ ಹಿರಿಯ ನಟ ದ್ವಾರಕೀಶ್ ಅವರೇ ವಿಡಿಯೊದಲ್ಲಿ ಮಾತನಾಡುವ ಮೂಲಕ ಅಭಿಮಾನಿಗಳಲ್ಲಿ ಮನೆ ಮಾಡಿದ್ದ ಆತಂಕವನ್ನು ದೂರ ಮಾಡಿದ್ದಾರೆ.
‘ನಮಸ್ಕಾರ, ನಿಮ್ಮ ದ್ವಾರಕೀಶ್, ನಿಮ್ಮ ಕರ್ನಾಟಕದ ಕುಳ್ಳ ಆರೋಗ್ಯವಾಗಿದ್ದೀನಿ. ಹುಷಾರಾಗಿದ್ದೀನಿ. ಯಾವುದೇ ತರಹದ ಸುಳ್ಳು ವದಂತಿಗಳಿಗೆ ನಿಗಾ ಕೊಡಬೇಡಿ. ಏನಾದರೂ ನಿಮಗೆ ಗೊತ್ತಾಗುತ್ತದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದಿಂದ ನಿಮ್ಮ ದ್ವಾರಕೀಶ್ ಚೆನ್ನಾಗಿದ್ದಾನೆ. ಚೆನ್ನಾಗಿರುತ್ತೇನೆ. ಎಲ್ಲ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ’ ಎಂದು ಹಿರಿಯ ನಟ ದ್ವಾರಕೀಶ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.