ADVERTISEMENT

ಫೈಟರ್ ಸಾವು: ₹10 ಲಕ್ಷ ಪರಿಹಾರ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ಭರವಸೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2021, 14:32 IST
Last Updated 10 ಆಗಸ್ಟ್ 2021, 14:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಮೃತಪಟ್ಟಿರುವ ಫೈಟರ್ ವಿವೇಕ್‌ ಕುಟುಂಬಸ್ಥರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಸದ್ಯ ಅಜ್ಞಾತ ಸ್ಥಳದಿಂದ ತಮ್ಮ ಆಪ್ತರ ಮೂಲಕ ನಿರ್ಮಾಪಕ ಗುರು ದೇಶಪಾಂಡೆ ಭರವಸೆ ನೀಡಿದ್ದಾರೆ. ಘಟನೆಯ ಬಳಿಕ ಗುರು ಅವರು ತಲೆಮರೆಸಿಕೊಂಡಿದ್ದಾರೆ.

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಜೋಗರದೊಡ್ಡಿಯಲ್ಲಿ ಸೋಮವಾರ ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ವಿವೇಕ್ ಎಂಬುವರು‌ ಮೃತಪಟ್ಟಿದ್ದರು.

ADVERTISEMENT

ಕಠಿಣ ನಿಯಮ ಜಾರಿ: ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಇದಕ್ಕೆ ಸಂಬಂಧಿಸಿ ಕಠಿಣ ನಿಯಮಗಳನ್ನು ರೂಪಿಸಿ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.