ಬೆಂಗಳೂರು: ಕನ್ನಡದಚಿತ್ರನಿರ್ಮಾಪಕ ಎಂ. ಚಂದ್ರಶೇಖರ್ ಬುಧವಾರ ರಾತ್ರಿ ನಿಧನರಾದರು.
ಕೋವಿಡ್ ನಿಂದ ಬಳಲಿದ್ದ ಅವರು, ಕೆಲ ದಿನಗಳ ಹಿಂದಷ್ಟೇ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಅವರಿಗೆ ಪತ್ನಿ, ಪುತ್ರಿ, ಒಬ್ಬ ಪುತ್ರ ಇದ್ದಾರೆ.
ಅಣ್ಣಯ್ಯ, ಬಿಂದಾಸ್, ರನ್ನ ಚಿತ್ರಗಳನ್ನು ಚಂದ್ರಶೇಖರ್ ನಿರ್ಮಾಣ ಮಾಡಿದ್ದರು. ಇತ್ತೀಚೆಗಷ್ಟೇ ತಮ್ಮ ಹೊಸ ಚಿತ್ರ ನಿರ್ಮಾಣದ ಬಗ್ಗೆ ಘೋಷಿಸಿದ್ದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.