ADVERTISEMENT

ನಟಿ ಕಂಗನಾ ರನೌತ್ ವಿರುದ್ಧ ತುಮಕೂರಲ್ಲಿ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 20:16 IST
Last Updated 13 ಅಕ್ಟೋಬರ್ 2020, 20:16 IST
ಕಂಗನಾ ರನೌತ್
ಕಂಗನಾ ರನೌತ್   

ತುಮಕೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ.

ಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿನೋದ್ ಬಾಲನಾಯಕ್ ಅವರು ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಶುಕ್ರವಾರ ನಿರ್ದೇಶನ ನೀಡಿದ್ದರು. ಹಾಗಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ರೈತರನ್ನು ಭಯೋತ್ಪಾದಕರೆಂದು ನಿಂದಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶ ಹಾಗೂ ದೊಂಬಿಗೆ ಪ್ರಚೋದನೆ ನೀಡುವಂತ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ಲಕ್ಷಾಂತರ ರೈತರ ಮನಸ್ಸಿಗೆ ಘಾಸಿಯಾಗಿದೆ’ ಎಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.