ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಅವರ ಮನೆಗೆ ಎರಡು ಬೆದರಿಕೆ ಪತ್ರಗಳು ಬಂದಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅವರ ಆಪ್ತ ಜಾಕ್ ಮಂಜು ಅವರು ದೂರು ನೀಡಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಅನಾಮಧೇಯ ಹೆಸರಿನಲ್ಲಿ ಪತ್ರ ಬರೆಯಲಾಗಿದೆ. ಮಾರ್ಚ್ 29ರಂದೇ ಸುದೀಪ್ ಅವರ ಮನೆಗೆ ಈ ಪತ್ರಗಳು ತಲುಪಿವೆ ಎನ್ನಲಾಗಿದೆ.
ಪತ್ರದಲ್ಲಿ ಸುದೀಪ್ ಹಾಗೂ ಅವರ ಪೋಷಕರನ್ನು ನಿಂದಿಸಲಾಗಿದೆ. ಜತೆಗೆ ವಿಡಿಯೊ ಬಹಿರಂಗ ಪಡಿಸುತ್ತೇವೆ ಎಂದು ಬೆದರಿಕೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಮುಂದಾಗಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.