ಜನವರಿ 15 ಸುಗ್ಗಿ ಹಬ್ಬ ಸಂಕ್ರಾಂತಿ. ಈ ಹಬ್ಬದ ಸಂಭ್ರಮದಲ್ಲೇ ಜನವರಿ 16 ರಂದು ‘ಗಾಜನೂರು’ ಎಂಬ ನೂತನ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೀರ್ತಿ ಕಥೆ, ಚಿತ್ರಕಥೆ ಬರೆದಿದ್ದು, ವಿಜಯ್ ನಿರ್ದೇಶಿಸುತ್ತಿದ್ದಾರೆ.
ಎಸ್.ಮೋಹನ್, ನಂದಕಿಶೋರ್ ಮುಂತಾದ ಖ್ಯಾತ ನಿರ್ದೇಶಕರ ಬಳಿ ಸಹನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ವಿಜಯ್ ಅವರ ನಿರ್ದೇಶನದ ಮೊದಲ ಚಿತ್ರ ‘ಗಾಜನೂರು’.
ಮೂಲತಃ ಕಲಬುರ್ಗಿಯವರಾದ ಅವಿನಾಶ್ ತಮ್ಮ ಕೃತಿಕಾರಾಮ್ ಮೂವೀಸ್ ಮೂಲಕ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಚೊಚ್ಚಲ ಚಿತ್ರ.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ತನ್ವಿಕ್ ಛಾಯಾಗ್ರಹಣ, ಅಮಿತ್ ಜಾವಾಳ್ಕರ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕ್ರಾಂತಿಕುಮಾರ್ ಸಂಭಾಷಣೆ ಬರೆಯುತ್ತಿದ್ದಾರೆ. ತೀರ್ಥಹಳ್ಳಿ, ಬೆಂಗಳೂರಿನಲ್ಲಿ 35 ದಿನಗಳ ಚಿತ್ರೀಕರಣ ನಡೆಯಲಿದೆ.
ಅವತಾರ್, ರವಿಶಂಕರ್, ತಬಲಾನಣಿ, ಕುರಿ ಪ್ರತಾಪ್, ಗೋಪಾಲಕೃಷ್ಣ ದೇಶಪಾಂಡೆ, ಬಾಬು ಹಿರಣ್ಣಯ್ಯ, ತರಂಗ ವಿಶ್ವ, ವಾಣಿ, ಸಂತು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.