ADVERTISEMENT

ಆರ್ಯನ್ ಖಾನ್ ಬರುವವರೆಗೆ ಮನೆಯಲ್ಲಿ ಸಿಹಿ ತಿನಿಸು ಮಾಡುವಂತಿಲ್ಲ: ಗೌರಿ ಖಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಅಕ್ಟೋಬರ್ 2021, 9:54 IST
Last Updated 19 ಅಕ್ಟೋಬರ್ 2021, 9:54 IST
ಶಾರುಖ್ ಖಾನ್ ಪುತ್ರನನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ.
ಶಾರುಖ್ ಖಾನ್ ಪುತ್ರನನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ.   

ಬೆಂಗಳೂರು: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಆರ್ಯನ್ ಖಾನ್‌ರನ್ನು ಬಂಧಿಸಿದೆ.ಪುತ್ರನ ಆಗಮನಕ್ಕಾಗಿ ಶಾರುಖ್ ಮತ್ತು ಗೌರಿ ದಂಪತಿ ಕಾದು ಕುಳಿತಿದ್ದು, ಮನೆಯಲ್ಲಿ ಸಂಭ್ರಮವಿಲ್ಲ.

ಈ ಮಧ್ಯೆ ಆರ್ಯನ್ ಖಾನ್ ಬರುವವರೆಗೂ ಮನೆಯಲ್ಲಿ ಯಾವುದೇ ರೀತಿಯ ಸಿಹಿ ತಿನಿಸು ಅಡುಗೆ ಮಾಡಬಾರದು ಎಂದು ಗೌರಿ ಖಾನ್ ಅಡುಗೆಯವರಿಗೆ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಮನೆಯಲ್ಲಿನ ಅಡುಗೆ ಸಿಬ್ಬಂದಿಗೆ ಗೌರಿ ಖಾನ್ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿಯಲ್ಲಿ ಹೇಳಿದೆ.

ADVERTISEMENT

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಅ. 20, ಬುಧವಾರ ನಡೆಯಲಿದೆ.

ಅ. 2ರಂದು ಆರ್ಯನ್ ಖಾನ್ ಬಂಧನವಾಗಿದ್ದು, ಅದಾದ ನಂತರ ಅವರು ನ್ಯಾಯಾಂಗ ಬಂಧನ ಮತ್ತು ಎನ್‌ಸಿಬಿ ಬಂಧನಕ್ಕೆ ಒಳಗಾಗಿ ಮುಂಬೈನ ಅರ್ಥರ್ ರೋಡ್ ಜೈಲಿನಲ್ಲಿಯೇ ಇರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.