ಬೆಂಗಳೂರು:ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಗಾಯಕ ವಿಜಯ್ ಪ್ರಕಾಶ್ ಜೋಡಿ ಜಂಟಲ್ಮನ್ ಚಿತ್ರದ ‘ಅರೆರೇ... ಶುರುವಾಯಿತು‘ ಹಾಡಿನ ಮೂಲಕ ಮತ್ತೆ ಮೋಡಿ ಮಾಡಿದೆ.
ಗುರುವಾರ ಯುಟ್ಯೂಬ್ನಲ್ಲಿ ಬಿಡುಗಡೆಯಾಗಿರುವ ಈ ರೋಮ್ಯಾಂಟಿಕ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.ಇದೇ ಜೋಡಿಯಾ'ಅವನೇ ಶ್ರೀಮನ್ನಾರಾಯಣ' ಚಿತ್ರದ ಹ್ಯಾಂಡ್ಸಪ್ ಹಾಡು ಸಖತ್ ಸೌಂಡ್ ಮಾಡಿತ್ತು.
ನಟ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ಮನ್ ಚಿತ್ರಕ್ಕೆ ಗುರು ದೇಶಪಾಂಡೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಅರೆರೆ ಶುರುವಾಯಿತು ಹೇಗೆ, ಪದವೇ ಸಿಗದಾಯಿತು ಹೇಗೆ, ಹೃದಯ ಕಳುವಾಯಿತು ಹೇಗೆ‘... ಎನ್ನುವ ಪದಗಳಿಂದ ಆರಂಭವಾಗುವ ಈ ಹಾಡು ಕೇಳುವುದಕ್ಕೆ ಇಂಪಾಗಿದೆ.ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಈ ಹಾಡು ಬರೆದಿದ್ದಾರೆ.
ಈಗಾಗಲೇ ಈ ಚಿತ್ರದ ಟೀಸರ್ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.