ADVERTISEMENT

ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ: ನಟಿ ಹರಿಪ್ರಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2021, 7:20 IST
Last Updated 19 ಡಿಸೆಂಬರ್ 2021, 7:20 IST
ನಟಿ ಹರಿಪ್ರಿಯಾ
ನಟಿ ಹರಿಪ್ರಿಯಾ   

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ..ಕನ್ನಡದ ಬಾವುಟ ಹಾರಲಿ.ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ ವಿಡಿಯೊ ಹಂಚಿಕೊಂಡಿದ್ದಾರೆ.

ADVERTISEMENT

ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿರುವ ನಟ ಪ್ರೇಮ್ ಅವರು, ‘ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು. ಬಾವುಟ ಸುಟ್ಟವರಿಗೆ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ಇತ್ತೀಚೆಗಷ್ಟೆ ನಟ ದರ್ಶನ್ ಸೇರಿದಂತೆ ಅನೇಕ ನಟ ನಟಿಯರು ಕನ್ನಡ ಭಾವುಟ ಸುಟ್ಟಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಭಾಷಾ ಸೌಹಾರ್ದತೆ ಕದಡುವ ಪುಂಡರನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.