ADVERTISEMENT

ಬೆದರಿಕೆ ಪತ್ರ ಕಳುಹಿಸಿದ್ದು ಯಾರೆಂದು ಗೊತ್ತಿದೆ. ತಕ್ಕ ಉತ್ತರ ಕೊಡುವೆ: ಸುದೀಪ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಏಪ್ರಿಲ್ 2023, 10:21 IST
Last Updated 5 ಏಪ್ರಿಲ್ 2023, 10:21 IST
   

ಬೆಂಗಳೂರು: ನನಗೆ ಬೆದರಿಕೆ ಪತ್ರ ಕಳುಹಿಸಿದ್ದು ಯಾರೆಂದು ತಿಳಿದಿದೆ. ಅವರಿಗೆ ತಕ್ಕ ಉತ್ತರ ಕೊಡುವುದಾಗಿ ನಟ ಕಿಚ್ಚ ಸುದೀಪ್ ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ. ಅದನ್ನು ಕಳುಹಿಸಿರುವುದು ಚಿತ್ರರಂಗದವರೇ ಎಂದೂ ಅವರು ಹೇಳಿದ್ದಾರೆ.

ಬೆಂಗಳೂರು ವಿಮಾನನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ ಮತ್ತು ಅದನ್ನು ಕಳುಹಿಸಿರುವುದೂ ಯಾರೆಂದು ಗೊತ್ತಿದೆ. ಚಿತ್ರರಂಗದವರೇ ಒಬ್ಬರು ಅದನ್ನು ಕಳುಹಿಸಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡುತ್ತೇನೆ’ ಎಂದು ಹೇಳಿದ್ದಾರೆ.

‘ಅವರಿಗೆ ನನ್ನ ಬಗ್ಗೆ ಗೊತ್ತಿದೆ. ಮನೆಯ ವಿಳಾಸ ತಿಳಿದಿದೆ. ಅವರು ಪೋಸ್ಟ್ ಮೂಲಕ ಬೆದರಿಕೆ ಪತ್ರ ಕಳುಹಿಸಿದ್ದು ಏಕೆ? ಎಂಬ ಕುರಿತಾದ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಬೆದರಿಕೆ ಪತ್ರಕ್ಕೆ ಉತ್ತರ ಕೊಡುತ್ತೇನೆ’ ಎಂದೂ ತಿಳಿಸಿದ್ದಾರೆ.

ADVERTISEMENT

ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದಿರುವ ಬಗ್ಗೆ ಅವರ ಮ್ಯಾನೇಜರ್ ಜ್ಯಾಕ್ ಮಂಜು, ಪೊಲೀಸರಿಗೆ ದೂರು ನೀಡಿದ್ದಾರೆ. ಮಾರ್ಚ್ 29ರಂದೇ ಸುದೀಪ್ ಅವರ ಮನೆಗೆ ಈ ಪತ್ರಗಳು ತಲುಪಿವೆ ಎನ್ನಲಾಗಿದೆ.

ಪತ್ರದಲ್ಲಿ ಸುದೀಪ್ ಹಾಗೂ ಅವರ ಪೋಷಕರನ್ನು ನಿಂದಿಸಲಾಗಿದೆ. ಜತೆಗೆ ವಿಡಿಯೊ ಬಹಿರಂಗ ಪಡಿಸುತ್ತೇವೆ ಎಂದು ಬೆದರಿಕೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಮುಂದಾಗಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.