ADVERTISEMENT

ಶೂಟಿಂಗ್‌ ಮುಗಿಸಿದ ‘ಇನಾಮ್ದಾರ್’: ಶೀಘ್ರ ತೆರೆಗೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 10:12 IST
Last Updated 13 ಸೆಪ್ಟೆಂಬರ್ 2022, 10:12 IST
ಅವಿನಾಶ್‌, ನಿರ್ದೇಶಕ ಸಂದೇಶ್‌ ಶೆಟ್ಟಿ
ಅವಿನಾಶ್‌, ನಿರ್ದೇಶಕ ಸಂದೇಶ್‌ ಶೆಟ್ಟಿ   

ಸಂದೇಶ್‌ ಶೆಟ್ಟಿ ಅಜ್ರಿ ನಿರ್ದೇಶನದ ‘ಇನಾಮ್ದಾರ್‌’ ಚಿತ್ರ ಶೂಟಿಂಗ್‌ ಮುಗಿಸಿದ್ದು ಶೀಘ್ರ ತೆರೆ ಕಾಣಲಿದೆ. ಯೋಗಪಟು ನಿರಂಜನ್‌ ಶೆಟ್ಟಿ ತಲ್ಲೂರು ನಿರ್ಮಾಣದ ಈ ಚಿತ್ರಕ್ಕೆರಂಜನ್ ಛತ್ರಪತಿ ನಾಯಕ.ಶಿರಶ್ರೀ ಅಂಚನ್ ನಾಯಕಿ. 5 ತಿಂಗಳ ಕಾಲ ಶೂಟಿಂಗ್‌ ನಡೆದಿದೆ. ಪಶ್ಚಿಮ ಘಟ್ಟ ಪ್ರದೇಶವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ಬಯಲುಸೀಮೆಯ ಒಂದು ಜನಾಂಗ ಮತ್ತು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಇನ್ನೊಂದು ಜನಾಂಗ ನಡುವೆ ನಡೆಯುವ ವರ್ಣ ಭೇದದ ಕಥಾ ಹಂದರದ ಚಿತ್ರವಿದು. ಚಿತ್ರದುದ್ದಕ್ಕೂ ಪಶ್ಚಿಮ ಘಟ್ಟದ ತಪ್ಪಲಿನ ಸೌಂದರ್ಯ ಕಾಣಬಹುದಾಗಿದ್ದು, ಬಯಲು ಸೀಮೆಯ ಸೊಬಗು ಚಿತ್ರ ರಸಿಕರಿಗೆ ಮೆಚ್ಚಿಗೆಯಾಗಲಿದೆ.

ಪ್ರಮೋದ್ ಶೆಟ್ಟಿ, ಶರತ್ ಲೋಹಿತಾಶ್ವ, ಅವಿನಾಶ್, ಥ್ರಿಲ್ಲರ್ ಮಂಜು, ಎಸ್ತಾರ್ ನೊರೋನಾ, ಎಂ.ಕೆ.ಮಠ, ರಘುಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ನಾಗರಾಜ್ ರಾವ್ ತಾರಾಗಣದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.