ADVERTISEMENT

ನಾನು ಸಾಧನೆ ಮಾಡಲು ಡಾ.ರಾಜ್‌ಕುಮಾರ್ ಕುಟುಂಬ ಕಾರಣ: ರಮ್ಯಾ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 20:29 IST
Last Updated 8 ಮಾರ್ಚ್ 2023, 20:29 IST
ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನ ಕಾರ್ಯಕ್ರಮದಲ್ಲಿ ನಟಿ ಸಪ್ತಮಿ ಗೌಡ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಆಯುಕ್ತ ತ್ರಿಲೋಕಚಂದ್ರ, ನಟಿ ರಮ್ಯಾ, ನಟ ಸಾಧುಕೋಕಿಲ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು
ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನ ಕಾರ್ಯಕ್ರಮದಲ್ಲಿ ನಟಿ ಸಪ್ತಮಿ ಗೌಡ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಆಯುಕ್ತ ತ್ರಿಲೋಕಚಂದ್ರ, ನಟಿ ರಮ್ಯಾ, ನಟ ಸಾಧುಕೋಕಿಲ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು   

ಬೆಂಗಳೂರು: ‘ನಾನು ಸಾಧನೆ ಮಾಡಲು ಡಾ.ರಾಜ್‌ಕುಮಾರ್ ಕುಟುಂಬ ಕಾರಣ’ ಎಂದು ನಟಿ ರಮ್ಯಾ ಹೇಳಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪಾಲಿಕೆ ಅಧಿಕಾರಿ ಮತ್ತು ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನದಲ್ಲಿ ಸಾಧಕಿಯರಿಗೆ ದಿಟ್ಟ ಮಹಿಳಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

‘ಮಾಡಿದ ಕೆಲಸದಿಂದ ಬೇರೊಬ್ಬರಿಗೆ ಒಳ್ಳೆಯದಾದರೆ ಸಾಕು ಎಂಬ ಭಾವನೆಯಿಂದ ರಾಜಕೀಯ, ಚಲನಚಿತ್ರ ರಂಗದಲ್ಲಿ ಸೇವೆ ಮಾಡಿದ್ದೇನೆ’ ಎಂದು ಹೇಳಿದರು.

ADVERTISEMENT

ನಟ ಸಾಧಕೋಕಿಲ ಮಾತನಾಡಿ, ‘ಮಹಿಳೆಯಂದರೆ ತಾಯಿ. ತಾಯಿಯನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.

ಬಿಬಿಎಂಪಿ ಆಡಳಿತಾದಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಹರೀಶ್, ತ್ರಿಲೋಕ್ ಚಂದ್ರ, ಪ್ರೀತಿ ಗಣೇಶ್, ಪಲ್ಲಿವಿ, ಐಪಿಎಸ್ ಅಧಿಕಾರಿ ಶೋಭರಾಣಿ, ನಿರೂಪಕಿ ಅರ್ಪಣಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.