ಬೆಂಗಳೂರು: ಲಯನ್ ಆರ್. ರಮೇಶ್ ಬಾಬು ಅವರು ನಿರ್ಮಿಸಿರುವ ‘ಜಗತ್ ಕಿಲಾಡಿ’ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಆರವ್ ಬಿ ಧೀರೇಂದ್ರ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿನಾಯಕರಾಮ ಕಲಗಾರು ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ, ಗಿರಿಧರ್ ದಿವಾನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.ನಿರಂಜನ್ಕುಮಾರ್ ಶೆಟ್ಟಿ ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅಮಿತಾ ಕುಲಾಳ್, ಜೈಜಗದೀಶ್, ವಿಶ್ವ, ರವಿಚೇತನ್, ಕೌಂಡಿನ್ಯ, ಮೈಕೋ ನಾಗರಾಜ್ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.