ADVERTISEMENT

ಜಯತೀರ್ಥ ನಿರ್ದೇಶನದ ತಿಗಳಪೇಟೆಯ ‘ಕೈವ’

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2023, 18:49 IST
Last Updated 16 ನವೆಂಬರ್ 2023, 18:49 IST
<div class="paragraphs"><p>ಧನ್ವೀರ್, ಮೇಘಾ ಶೆಟ್ಟಿ</p></div>

ಧನ್ವೀರ್, ಮೇಘಾ ಶೆಟ್ಟಿ

   

‘ಬೆಲ್‌ಬಾಟಂ’ ನಂತರ ನಿರ್ದೇಶಕ ಜಯತೀರ್ಥ ‘ಕೈವ’ನೊಂದಿಗೆ ಮತ್ತೆ ಬಂದಿದ್ದಾರೆ. ವಿಚಿತ್ರವಾಗಿರುವ ಚಿತ್ರದ ಶೀರ್ಷಿಕೆ ಓರ್ವ ವ್ಯಕ್ತಿಯ ಹೆಸರಂತೆ. ಚಿತ್ರದ ಆ್ಯಕ್ಷನ್‌ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಧನ್ವೀರ್, ಮೇಘ ಶೆಟ್ಟಿ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. 

‘‘ಕೈವ’ 1983ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಇದೇ ವರ್ಷ ನಡೆದ ಗಂಗಾರಾಮ್ ಕಟ್ಟಡದ ದುರಂತಕ್ಕೂ ಚಿತ್ರದ ಕಥೆಗೂ ಸಂಬಂಧವಿದೆ’’ ಎಂದರು ನಿರ್ದೇಶಕ ಜಯತೀರ್ಥ. 

ADVERTISEMENT

ರವೀಂದ್ರಕುಮಾರ್ ನಿರ್ಮಾಣದ ಚಿತ್ರದಲ್ಲಿ ದಿನಕರ್ ತೂಗುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘು ಶಿವಮೊಗ್ಗ ಸೇರಿ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಅಜನೀಶ್ ಲೋಕನಾಥ್ ಸಂಗೀತ, ಶ್ವೇತಪ್ರಿಯ ಛಾಯಾಗ್ರಹಣ, ರಘು ನಿಡವಳ್ಳಿ ಸಂಭಾಷಣೆ ಚಿತ್ರಕ್ಕಿದೆ.

‘ಮೈಸೂರಿನಲ್ಲಿ ನಲವತ್ತೆಂಟು ದಿನಗಳ ಚಿತ್ರೀಕರಣ ನಡೆದಿದೆ. ಕೆಲವು ಭಾಗಗಳನ್ನು ಬೆಂಗಳೂರಿನ ತಿಗಳರಪೇಟೆಯಲ್ಲಿ ಚಿತ್ರೀಕರಿಸಲಾಗಿದೆ. ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಜಯತೀರ್ಥ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.