ಸ್ನೇಹದ ಮಹತ್ವ ಸಾರಲಿದೆ ‘ಜಿಗ್ರಿದೋಸ್ತ್’ ಚಿತ್ರ. ಸೆ. 17ರಂದು ತೆರೆ ಕಾಣಲಿದೆ.ನಿರ್ಮಾಪಕ ಬಿ.ಎನ್.ಗಂಗಾಧರ್ ಅವರ 27ನೇ ಚಿತ್ರವಿದು.ನಟ ಹಾಗೂ ನಿರ್ದೇಶಕ ಎಸ್.ಮೋಹನ್ ಈ ಚಿತ್ರ ನಿರ್ದೇಶಿಸಿದ್ದಾರೆ.ದಿನೇಶ್ ಕುಮಾರ್ ಚಿತ್ರದಸಂಗೀತ ನಿರ್ದೇಶಕ.
ಚಿತ್ರದಲ್ಲಿ ಸ್ಕಂದ ಅಶೋಕ್ ಹಾಗೂ ಚೇತನ್ ಇಬ್ಬರೂ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷತಾ, ಸುಷ್ಮಾ ನಾಯಕಿಯರು. ಪಂಚಭಾಷಾ ನಟ ವಿನೋದ್ ಆಳ್ವ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಚಿತ್ಕಲಾ ಬಿರಾದಾರ್ , ಇರ್ಫಾನ್, ಮಂಜುನಾಥ್, ರಮೇಶ್ ಪಂಡಿತ್, ಟಿನ್ನಿಸ್ ಕೃಷ್ಣ ತಾರಾಗಣದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು ಮೋಹನ್.
‘ಕೋವಿಡ್ ಬರದಿದ್ದರೆ ಕಳೆದವರ್ಷ ನಮ್ಮ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಈಗ ಬಿಡುಗಡೆ ಮಾಡುತ್ತಿದ್ದೇವೆ ನೋಡಿ ಹರಸಿ’ ಎಂದರು ಬಿ.ಎನ್.ಗಂಗಾಧರ್.
ಪ್ರಸಾದ್ ಬಾಬು ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಮದನ್ - ಹರಿಣಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.