ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಸೋಮವಾರ ಅಮೃತಸರದ ಪ್ರಸಿದ್ಧ ಶ್ರೀ ಹರ್ಮಂದಿರ್ ಸಾಹಿಬ್ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ ಗುರುನಾನಕ್ ದೇವ್ ಅವರ ಆಶೀರ್ವಾದ ಪಡೆದಿದ್ದಾರೆ.
ಬಳಿಕ ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ಅಭಿಮಾನಿಗಳಿಗಾಗಿ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಅತ್ಯಾಚಾರ ಪ್ರಕರಣ: ಬಾಲಿವುಡ್ ನಟಿ ಕಂಗನಾ ರನೌತ್ ಅಂಗರಕ್ಷಕ ಮಂಡ್ಯದಲ್ಲಿ ಬಂಧನ
ಇದೇ ಮೊದಲ ಬಾರಿಗೆ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡುತ್ತಿರುವುದಾಗಿ 34ರ ಹರೆಯದ ನಟಿ ಹೇಳಿದ್ದಾರೆ.
ಸ್ವರ್ಣ ಮಂದಿರದ ಸೌಂದರ್ಯಕ್ಕೆ ತಾವು ಬೆರಗಾಗಿದ್ದು, ವರ್ಣಿಸಲು ಪದಗಳೇ ಸಿಗುತ್ತಿಲ್ಲ ಎಂದು ನಟಿ ಬರೆದುಕೊಂಡಿದ್ದಾರೆ.
ನಾಲ್ಕು ಬಾರಿಯ ರಾಷ್ಟ್ರೀಯ ಪ್ರಶಸ್ತಿ ವಿಜೇತೆ, ಸಿಖ್ ಧರ್ಮದ ಸಂಪ್ರದಾಯದಂತೆ ಉಡುಪು ಧರಿಸಿ ಸ್ವರ್ಣ ಮಂದಿರಕ್ಕೆ ನಟಿ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.