ADVERTISEMENT

ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ

1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದಿದ್ದ ಬಾಲಿವುಡ್ ನಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2021, 9:35 IST
Last Updated 13 ನವೆಂಬರ್ 2021, 9:35 IST
ಕಂಗನಾ ರನೌತ್
ಕಂಗನಾ ರನೌತ್   

ನವದೆಹಲಿ:ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ 'ಪದ್ಮಶ್ರೀ'ಪ್ರಶಸ್ತಿ ವಾಪಸ್ ಮಾಡುವುದಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

‘ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಕಂಗನಾ ಗುರುವಾರ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ 'ಪದ್ಮಶ್ರೀ' ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಟೀಕೆಗಳಿಗೆ ಇನ್‌ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ,ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.