ಬೆಂಗಳೂರು: ಹೃದಯಾಘಾತದಿಂದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ.
ಕನ್ನಡದ ಮೇರುನಟ ರಾಜ್ಕುಮಾರ್ ಕೂಡ ನೇತ್ರದಾನ ಮಾಡುವ ಮೂಲಕಮಾದರಿಯಾಗಿದ್ದರು.
ಇದೀಗ ಅಪ್ಪು ಪುನೀತ್ ರಾಜ್ಕುಮಾರ್ ಕೂಡ ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್ ರಾಜ್ಕುಮಾರ್ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಚಿಕಿತ್ಸೆ ನೀಡಲು ವೈದ್ಯರು ಪ್ರಯತ್ನಿಸಿದರಾದರೂ, ಅಪ್ಪು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.
ನೇತ್ರದಾನದ ಕುರಿತು ಪುನೀತ್ ರಾಜ್ಕುಮಾರ್ ಹಲವು ಸಂದರ್ಭದಲ್ಲಿ ಜಾಗೃತಿ ಮೂಡಿಸಿದ್ದರು.
ಈಗ ನೇತ್ರದಾನ ಮಾಡುವ ಮೂಲಕ ನುಡಿದಂತೆ ನಡೆದು ಮಾದರಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.