ಬೆಂಗಳೂರು: ನಟ ವಿಷ್ಣುವರ್ಧನ್ ಅವರ 13ನೇ ವರ್ಷದ ಪುಣ್ಯ ತಿಥಿಯ ಅಂಗವಾಗಿ ‘ವಿಎಸ್ಎಸ್ ಅಭಿಮಾನ್ ಡಾ.ವಿಷ್ಣವರ್ಧನ್ ಪುಣ್ಯಭೂಮಿ ಟ್ರಸ್ಟ್’ ವತಿಯಿಂದ ಡಿ. 30ರಂದು ಬನಶಂಕರಿ ದೇವಸ್ಥಾನದಿಂದ ಅಭಿಮಾನ್ ಸ್ಟುಡಿಯೋ ವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ರಾಜುಗೌಡ, 'ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯ ಭೂಮಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು,ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಅವರ ಸಮಾಧಿಯ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.
‘ಮೈಸೂರಿನಲ್ಲಿ ಸ್ಥಾಪಿಸಿರುವ ‘ವಿಷ್ಣುವರ್ಧನ್ ಸ್ಮಾರಕ’ವನ್ನು ಸರ್ಕಾರ 2022ರ ಡಿ.18 ರಂದು ಲೋಕಾರ್ಪಣೆ ಮಾಡುವುದಾಗಿ ತಿಳಿಸಿತ್ತು. ಆದರೆ ಇದುವರೆಗೂ ಲೋಕಾರ್ಪಣೆ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ನಟ ವಿಷ್ಣುವರ್ಧನ್ ಅಭಿಮಾನಿಗಳು ಡಿ. 30ರಂದು (ಶುಕ್ರವಾರ) ನಡೆಯುವ ಪಾದಯಾತ್ರೆ ಬೆಳಿಗ್ಗೆ 7.30ಕ್ಕೆ ಪ್ರಾರಂಭವಾಗಲಿದೆ. ಅಭಿಮಾನ್ ಸ್ಟುಡಿಯೋಗೆ ತೆರಳಿ ವಿಷ್ಣುವರ್ಧನ್ ಸಮಾಧಿಗೆ ಪೂಜೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.