ಬೆಂಗಳೂರು: ತಮಗೆ 1.60 ಕೋಟಿ ರೂಪಾಯಿ ಮೋಸ ಮಾಡಿರುವ ಬಗ್ಗೆ ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ಎಸ್. ನಾರಾಯಣ್ ಅವರು ಸಿಸಿಬಿ ಡಿಸಿಪಿ ರವಿಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಕಳೆದ ವರ್ಷ ಎಸ್. ನಾರಾಯಣ್ ಮತ್ತು ಮೂವರು ಸೇರಿ ಸಿನಿಮಾವೊಂದನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ, ಸಿನಿಮಾ ಮುಹೂರ್ತ ಮಾತ್ರವೇ ಆಗಿತ್ತು. ಶೂಟಿಂಗ್ ನಿಂತು ಹೋಗಿತ್ತು.
ಪಾಲುದಾರರು ಸಿನಿಮಾದ ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್. ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ನಾರಾಯಣ್ ಅವರು 1.60 ಕೋಟಿ ಹಣ ಕೊಟ್ಟು ಎಚ್.ಬಿ.ಆರ್. ಬಡಾವಣೆಯಲ್ಲಿ ನಿವೇಶನವನ್ನು ಖರೀದಿಸಿದ್ದರು.
ಆದರೆ, ಖರೀದಿಸಿದ ನಿವೇಶನದ ದಾಖಲೆಗಳು ನಕಲಿ ಆಗಿವೆ. ನಕಲಿ ದಾಖಲೆ ಕೊಟ್ಟು ನನ್ನ ಬಳಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ನಾರಾಯಣ್ ಉಲ್ಲೇಖಿಸಿದ್ದಾರೆ.
ನಿವೇಶನ ಕೊಳ್ಳಲು ಬ್ಯಾಂಕ್ ನಲ್ಲಿ ಸಾಲ ಮಾಡಿದ್ದೆ. ಸಾಲದ ಮೊತ್ತ ಈಗ 2 ಕೋಟಿ ರೂಪಾಯಿ ದಾಟಿದೆ. ಸಾಲ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ನ್ಯಾಯ ಒದಗಿಸಿಕೊಡಿ ಎಂದೂ ಪೊಲೀಸರ ಬಳಿ ಅವರು ಮನವಿ ಮಾಡಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.