ADVERTISEMENT

ನೀವು ಒಂದ್ಸಲ ಹೊಗಳಿದ್ರೆ, ನೂರು ಸಲ ಹೊಗಳ್ದಂಗೆ: ರಜನಿ ಭೇಟಿ ಬಳಿಕ ರಿಷಬ್ ಟ್ವೀಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಅಕ್ಟೋಬರ್ 2022, 2:43 IST
Last Updated 29 ಅಕ್ಟೋಬರ್ 2022, 2:43 IST
ರಜನಿಕಾಂತ್‌ ಅವರನ್ನು ಭೇಟಿಯಾದ ರಿಷಬ್‌ ಶೆಟ್ಟಿ
ರಜನಿಕಾಂತ್‌ ಅವರನ್ನು ಭೇಟಿಯಾದ ರಿಷಬ್‌ ಶೆಟ್ಟಿ    

ಚೆನ್ನೈ: ಕನ್ನಡದ ಸಿನಿಮಾ ‘ಕಾಂತಾರ’ವನ್ನು ನೋಡಿ ಹೊಗಳಿದ್ದ ರಜನಿಕಾಂತ್‌ ಅವರನ್ನು ನಟ ರಿಷಬ್‌ ಶೆಟ್ಟಿ ಅವರು ಶುಕ್ರವಾರ ಚೆನ್ನೈನ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಇತ್ತೀಚೆಗಷ್ಟೆ ಸಿನಿಮಾ ನೋಡಿದ್ದ ರಜನಿಕಾಂತ್‌ ಅವರು ಚಿತ್ರದ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದ್ದರು.

’ತಿಳಿದಿರುವುದಕ್ಕಿಂತ ತಿಳಿಯದಿರುವುದು ಬಹಳಷ್ಟಿರುತ್ತವೆ. ಹೊಂಬಾಳೆ ಫಿಲಂಸ್‌, ರಿಷಬ್‌ ಶೆಟ್ಟಿ ಉತ್ತಮ ಸಿನಿಮಾ ನೀಡಿದ್ದಾರೆ. ರಿಷಬ್‌ ನಟನೆ, ನಿರ್ದೆಶನ, ಬರವಣಿಗೆಗೆ ಹ್ಯಾಟ್ಸಪ್‌. ಮೈನವಿರಳೇಸಿರುವ ಅನುಭವ ನೀಡಿದೆ. ತಂಡಕ್ಕೆ ಶುಭಾಶಯಗಳು’ ಎಂದಿದ್ದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ್ದ ರಿಷಬ್‌ ಶೆಟ್ಟಿ, ‘ಸರ್‌ ನೀವು ಭಾರತದ ದೊಡ್ಡ ಸೂಪರ್‌ಸ್ಟಾರ್. ಬಾಲ್ಯದಿಂದಲೂ ನಾನು ನಿಮ್ಮ ಅಭಿಮಾನಿ. ನಿಮ್ಮ ಮೆಚ್ಚುಗೆಯಿಂದ ನನ್ನ ಕನಸು ನನಸಾದಂತಾಗಿದೆ. ಸ್ಥಳೀಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳಲು ನೀವು ನನಗೆ ಪ್ರೇರಣೆಯಾಗಿದ್ದೀರಿ’ ಎಂದು ಟ್ವೀಟ್‌ ಮಾಡಿದ್ದರು.

ಇದರ ಬೆನ್ನಿಗೇ, ರಿಷಬ್‌ ಶೆಟ್ಟಿ ಚೆನ್ನೈನಲ್ಲಿ ರಜನಿಕಾಂತ್‌ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

‘ನೀವು ಒಂದ್ ಸಲ ಹೊಗಳಿದ್ರೆ... ನೂರು ಸಲ ಹೊಗಳ್ದ೦ಗೆ ನಮಗೆ. ಧನ್ಯವಾದಗಳು ರಜನಿಕಾಂತ್‌ ಸರ್‌. ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ’ ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಕಾಂತಾರ ಸಿನಿಮಾ ಸದ್ಯ ತಮಿಳು, ತೆಲುಗು, ಹಿಂದಿ, ಮಲಯಾಳದಲ್ಲಿಯೂ ಉತ್ತಮ ಸ್ಪಂದನೆ ಪಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.