ADVERTISEMENT

‘ಕರ್ಮಣ್ಯೇವಾಧಿಕಾರಸ್ತೇ’ ಸೆಪ್ಟೆಂಬರ್‌ನಲ್ಲಿ ತೆರೆಗೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 7:37 IST
Last Updated 30 ಆಗಸ್ಟ್ 2021, 7:37 IST
ಪ್ರತೀಕ್ ಸುಬ್ರಮಣಿ
ಪ್ರತೀಕ್ ಸುಬ್ರಮಣಿ   

ಭಗವದ್ಗೀತೆಯ ಮಾತು ‘ಕರ್ಮಣ್ಯೇವಾಧಿಕಾರಸ್ತೆ’ ಇಲ್ಲಿ ಚಿತ್ರದ ಶೀರ್ಷಿಕೆಯಾಗಿದೆ. ಚಿತ್ರದ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದೆ. ಸೆ. 24ರಂದು ಚಿತ್ರ ತೆರೆಗೆ ಬರಲಿದೆ. ಟ್ರೇಲರ್‌ ಶೀಘ್ರ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ಕೊಲೆ ರಹಸ್ಯ ಬೇಧಿಸುವ ಕಥಾಹಂದರ ಹೊಂದಿದೆ ಈ ಚಿತ್ರ. ಚಿತ್ರವನ್ನು ಶ್ರೀಹರಿ ಆನಂದ್‌ ನಿರ್ದೇಶಿಸಿದ್ದಾರೆ. 45 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಬೆಂಗಳೂರು, ಆಗುಂಬೆ, ತೀರ್ಥಹಳ್ಳಿ, ದಾಂಡೇಲಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಅಮೇರಿಕಾದಲ್ಲಿ ವೈದ್ಯರಾಗಿರುವ ರಮೇಶ್ ರಾಮಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಎರಡು ಹಾಡುಗಳಿವೆ. ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ. ಸಂಜಿತ್ ಹೆಗ್ಡೆ, ಅಶ್ವಿನಿ, ರಿತ್ವಿಕ್ ಮುರಳೀಧರ್, ಅನನ್ಯಾ ಭಟ್ ಹಾಡಿದ್ದಾರೆ. ಮೂರು ಸಾಹಸ ಸನ್ನಿವೇಶಗಳಿಗೆ ಮಾಸ್ ಅಶೋಕ್ ಸಾಹಸ ನಿರ್ದೇಶನ ಮಾಡಿದ್ದಾರೆ.

ADVERTISEMENT

ಉದಯಲೀಲಾ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ.

ಪ್ರತೀಕ್ ಸುಬ್ರಮಣಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ದಿವ್ಯ ಹಾಗೂ ನೇಪಾಳದ ಡೋಲ್ಮ ನಾಯಕಿಯರು. ನಾಟ್ಯ ರಂಗ, ಉಗ್ರಂ ಮಂಜು, ನಟನ ಪ್ರಶಾಂತ್ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.