ADVERTISEMENT

ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ: ಸಿಎಂರನ್ನು ಭೇಟಿಯಾದ ನಟಿಯರು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 14:40 IST
Last Updated 2 ಸೆಪ್ಟೆಂಬರ್ 2025, 14:40 IST
<div class="paragraphs"><p>ಸಿಎಂರನ್ನು ಭೇಟಿಯಾದ ನಟಿಯರು</p></div>

ಸಿಎಂರನ್ನು ಭೇಟಿಯಾದ ನಟಿಯರು

   

ಬೆಂಗಳೂರು: ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಹಿರಿಯ ನಟಿಯರು ಮನವಿ ಸಲ್ಲಿಸಿದ್ದಾರೆ.

ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾದರು.

ADVERTISEMENT

ಸಿದ್ದರಾಮಯ್ಯ ಅವರು ಈ ಬಗ್ಗೆ ಎಕ್ಸ್ ಪೋಸ್ಟ್ ಹಂಚಿಕೊಂಡು, ‘ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.