ತೆಲುಗು ಹಾಗೂ ತಮಿಳಿನ ಜನಪ್ರಿಯ ನಟಿ ಕೀರ್ತಿ ಸುರೇಶ್ಗೆ ಕೋವಿಡ್ ದೃಢಪಟ್ಟಿದ್ದು, ನನಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದಲ್ಲಿ ಕೊವಿಡ್ ತೀವ್ರ ಪ್ರಮಾಣದಲ್ಲಿ ಏರುತ್ತಿದ್ದು ಅಭಿಮಾನಿಗಳುಸೋಂಕನ್ನು ನಿರ್ಲಕ್ಷ್ಯ ಮಾಡದೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕರೆ ನೀಡಿದ್ದಾರೆ.
ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ ನನಗೆ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳು ಇರುವುದರಿಂದ ಆದಷ್ಟು ಬೇಗ ಗುಣಮುಖಳಾಗಿ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.
ಲಸಿಕೆ ಪಡೆಯದವರು ಆದಷ್ಟು ಶೀಘ್ರವಾಗಿ ಪಡೆದುಕೊಳ್ಳಿ. ಇದರಿಂದಾಗಿ ಸೋಂಕಿನ ಪರಿಣಾಮ ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ ಹಾಗೂ ತೀವ್ರತರ ಸೋಂಕಿನಿಂದ ಪಾರಾಗಬಹುದು ಎಂದು ಹೇಳಿದ್ದಾರೆ.
ನಟಿಯ ಪೋಸ್ಟ್ಗೆ ಅಭಿಮಾನಿಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
ಇತ್ತೀಚೆಗೆ ಕೀರ್ತಿ ಅವರು ರಜನಿಕಾಂತ್ ಅಭಿನಯದ ‘ಅಣ್ಣಾತೆ’, ಮೋಹನ್ಲಾಲ್ ಅವರ ‘ಮರಕ್ಕರ್’ ಚಿತ್ರಗಳಲ್ಲಿ ನಟಿಸಿದ್ದರು. ಸದ್ಯ ಅವರು 5 ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.