ADVERTISEMENT

ಗೋವಾ ಸಿಎಂ ಭೇಟಿಯಾದ ಯಶ್‌, ರಾಧಿಕ ಪಂಡಿತ್‌: ಉದ್ದೇಶ ಏನಿರಬಹುದು?

​ಪ್ರಜಾವಾಣಿ ವಾರ್ತೆ
Published 4 ಮೇ 2022, 11:03 IST
Last Updated 4 ಮೇ 2022, 11:03 IST
ಯಶ್‌, ರಾಧಿಕ ಪಂಡಿತ್‌, ಪ್ರಮೋದ್‌ ಸಾವಂತ್‌
ಯಶ್‌, ರಾಧಿಕ ಪಂಡಿತ್‌, ಪ್ರಮೋದ್‌ ಸಾವಂತ್‌   

ಪಣಜಿ: ಕೆ.ಜಿ.ಎಫ್‌–2 ಸಿನಿಮಾದ ನಾಯಕ ರಾಕಿಂಗ್‌ ಸ್ಟಾರ್ ಯಶ್‌, ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ.

ಯಶ್‌, ಪತ್ನಿ ರಾಧಿಕಾ ಪಂಡಿತ್‌ ಹಾಗೂ ಕೆಜಿಎಫ್‌ ಚಿತ್ರ ತಂಡದ ಸದಸ್ಯರು ಮುಖ್ಯಮಂತ್ರಿಗಳ ನಿವಾಸದಲ್ಲಿ ಪ್ರಮೋದ್‌ ಸಾವಂತ್‌ ಅವರನ್ನು ಭೇಟಿಮಾಡಿದ್ದಾರೆ.

ಈ ಬಗ್ಗೆ ಪ್ರಮೋದ್‌ ಸಾವಂತ್‌ ಟ್ವೀಟ್‌ ಮಾಡಿದ್ದು, ರಾಕಿಂಗ್‌ ಸ್ಟಾರ್‌ ಯಶ್‌, ರಾಧಿಕಾ ಪಂಡಿತ್‌ ಹಾಗೂ ಕೆಜಿಎಫ್‌ ಚಿತ್ರದ ತಂಡವನ್ನು ಭೇಟಿ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಹೇಳಿದ್ದಾರೆ. ಹಾಗೇ ಭೇಟಿಯ ಚಿತ್ರಗಳನ್ನು ಅವರು ಶೇರ್‌ ಮಾಡಿದ್ದಾರೆ.

ADVERTISEMENT

ಯಶ್‌ ಹಾಗೂ ಗೋವಾ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಚಾರಗಳು ಬಹಿರಂಗವಾಗಿಲ್ಲ. ಆದಾಗ್ಯೂ ಅಭಿಮಾನಿಗಳು ಭೇಟಿಯ ಫೋಟೊಗಳನ್ನು ಶೇರ್‌ ಮಾಡಿಕೊಂಡು ಯಶ್‌ ಅವರ ಮುಂದಿನ ನಡೆಯ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ.

ಯಶ್‌ ರಾಜಕೀಯಕ್ಕೆ ಬರಬಹುದು ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಯಶ್‌ ದೊಡ್ಡ ಬಜೆಟ್‌ ಸಿನಿಮಾ ಮಾಡುತ್ತಿದ್ದು ಗೋವಾದಲ್ಲಿ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿರಬಹುದು ಎಂದು ಕೆಲ ಅಭಿಮಾನಿಗಳು ಕಾಮೆಂಟ್‌ ಮಾಡಿದ್ದಾರೆ.

ಸದ್ಯ ಕೆಜಿಎಫ್‌ –2 ಸಿನಿಮಾ ಸಾವಿರ ಕೋಟಿ ಕ್ಲಬ್‌ ಸೇರಿದೆ. ಹೊಸದಾಗಿ ಬಿಡುಗಡೆಯಾಗುತ್ತಿರುವ ಹಿಂದಿ, ತೆಲುಗು ಸಿನಿಮಾಗಳನ್ನು ಹಿಂದಿಕ್ಕಿ ಮುನ್ನುಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.