ನಟ ಕಿಚ್ಚ ಸುದೀಪ್ ಜನ್ಮದಿನ(ಸೆ.2) ಹಿನ್ನಲೆಯಲ್ಲಿ ಅವರ ಅಭಿಮಾನಿಗಳಿಗೆ ಜೀ–5 ಒಟಿಟಿ ಭರ್ಜರಿ ಸಿಹಿ ಸುದ್ದಿ ನೀಡಿದೆ.
ಕಿಚ್ಚ ಸುದೀಪ್ ಪೊಲೀಸ್ ಅಧಿಕಾರಿಯಾಗಿ ಬೆಳ್ಳಿ ಪರದೆಯ ಮೇಲೆ ಅಬ್ಬರಿಸುತ್ತಿರುವ ವಿಕ್ರಾಂತ್ ರೋಣ ಸಿನಿಮಾವನ್ನು ಒಟಿಟಿ ವೇದಿಕೆಗೆ ತರಲಾಗುತ್ತಿದೆ.
ಈ ಬಗ್ಗೆ ಜೀ–5 ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಮುಂದಿನವಾರದಲ್ಲಿ ಬಿಡುಗಡೆ ದಿನಾಂಕದ ಮಾಹಿತಿ ನೀಡಲಾಗುವುದು ಎಂದು ಜೀ–5 ಹೇಳಿದೆ.
ಜುಲೈ 28ರಂದು ವಿಶ್ವದಾದ್ಯಂತ 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಗಲ್ಲಾಪೆಟ್ಟಿಗೆಯಲ್ಲೂ ಚಿತ್ರಉತ್ತಮ ಗಳಿಕೆ ಕಂಡಿತ್ತು.
ನಿರ್ದೇಶಕ ಅನೂಪ್ ಭಂಡಾರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮೊದಲಿಗೆ ಕನ್ನಡದಲ್ಲಿ ಮಾತ್ರ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ನಂತರ ಬೇರೆ ಭಾಷೆಗಳಲ್ಲಿಯೂ ಚಿತ್ರ ಬಿಡುಗಡೆಯಾಗಲಿದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.