ADVERTISEMENT

ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ‘ಕೊಡಗ್‌ರ ಸಿಪಾಯಿ’ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 11:46 IST
Last Updated 24 ಫೆಬ್ರುವರಿ 2020, 11:46 IST
ಕೊಡಗ್‌ರ ಸಿಪಾಯಿ
ಕೊಡಗ್‌ರ ಸಿಪಾಯಿ   

ಮಡಿಕೇರಿ: ಬೆಂಗಳೂರಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕೊಡಗ್‌ರ ಸಿಪಾಯಿ (ಕೊಡವ ಭಾಷಾ ಚಲನಚಿತ್ರ) ಆಯ್ಕೆಯಾಗಿದೆ. ತೀತಿಮಾಡ ಅರ್ಜುನ್ ದೇವಯ್ಯ ಹಾಗೂ ತೇಜಸ್ವಿನಿ ಶರ್ಮ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಬೆಂಗಳೂರಿನಲ್ಲಿ ಇದೇ 26ರಿಂದ ಮಾರ್ಚ್‌ 4ರ ವರೆಗೆ ನಡೆಯುವ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ಆಯ್ಕೆಯಾಗಿದೆ. ಚಿತ್ರೋತ್ಸವಕ್ಕೆ 220ಕ್ಕೂ ಅಧಿಕ ಚಿತ್ರಗಳು ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸಿದ್ದವು. ಕೊಡವರ ಸಿಪಾಯಿ ಸೇರಿದಂತೆ 25 ಚಿತ್ರಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಕೊಡವರ ಸಿಪಾಯಿ ಕೋಲ್ಕತ್ತಾದಲ್ಲಿ ನಡೆದ ಅಂತರರಾಷ್ಟ್ರೀಯ ‘ಸಿನಿ ಉತ್ಸವ’ದಲ್ಲಿಯೂ ಪ್ರದರ್ಶನ ಕಂಡಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ತೆರೆಕಂಡಿದ್ದ ಕೊಡವರ ಸಿಪಾಯಿ ಕೊಡಗಿನ ಬಹುತೇಕ ಊರುಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿತ್ತು. ಮೈಸೂರು ಕೊಡವ ಸಮಾಜದಲ್ಲಿಯೂ ಪ್ರದರ್ಶನ ಕಂಡ ಕೊಡವರ ಸಿಪಾಯಿ ಫೆ.28ರಂದು ಬೆಂಗಳೂರು ಕೊಡವ ಸಮಾಜದಲ್ಲಿಯೂ ಪ್ರದರ್ಶನ ಕಾಣುತ್ತಿದೆ. ಈವರೆಗೆ 100ಕ್ಕೂ ಅಧಿಕ ಪ್ರದರ್ಶನ ಕಂಡಿದೆ. ಕೊಡಗಿನ ಸೈನಿಕರೊಬ್ಬರು ಕರ್ತವ್ಯದಿಂದ ನಿವೃತ್ತನಾದ ಬಳಿಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮತ್ತು ನಿವೃತ್ತ ಯೋಧನ ಬದುಕು ಬವಣೆಯ ಕಥೆ ಚಿತ್ರದಲ್ಲಿದೆ. ಉಳುವಗಂಡ ಕಾವೇರಿ ಅವರ ಚಿತ್ರಕಥೆ. ಕೊಟ್ಟುಕತ್ತೀರ ಪ್ರಕಾಶ್ ಕಾಯ೯ಪ್ಪ ನಿರ್ದೇಶನವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.