ನಟ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ಅವರು ತಮ್ಮದೇ ಪಿಎ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ಮಾಡಿರುವ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಗಲಿದೆ. ನಟ ರಾಜ್ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿತು.
ಶ್ರೀರಾಜ್ ನಿರ್ದೇಶನ ಚೊಚ್ಚಲ ಚಿತ್ರದಲ್ಲಿ ಪೃಥ್ವಿ ಅಂಬಾರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ತಾರಾಬಳಗದಲ್ಲಿದ್ದಾರೆ. ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ಯಲ್ಲಿ ಕಂಪ್ಲೀಟ್ ಮಾಸ್ ಪಾತ್ರದಲ್ಲಿದ್ದಾರೆ. ಚಿತ್ರದ ಮೊದಲ ಹಾಡು ‘ಮುಂಗಾರು ಮಳೆಯೆಂಬ’ ಬಿಡುಗಡೆಯಾಗಿದ್ದು, ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ನಿಶಾನ್ ರೈ, ಸುನಿಧಿ ಗಣೇಶ್ ದನಿಯಾಗಿರುವ ಈ ಹಾಡಿಗೆ ವಿಕಾಸ್ ವಸಿಷ್ಠ ಸಂಗೀತ ನೀಡಿದ್ದಾರೆ.
ಕಾರ್ತಿಕ್ ಎಸ್. ಛಾಯಾಚಿತ್ರಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ಪೀರ್ ಸಾಹಿತ್ಯ ಚಿತ್ರದ ಹಾಡುಗಳಿಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.