ADVERTISEMENT

ತಮಿಳು ನಟ ವಿಶಾಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 12:35 IST
Last Updated 12 ನವೆಂಬರ್ 2022, 12:35 IST
ಕುಕ್ಕೆ ಕ್ಷೇತ್ರಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.
ಕುಕ್ಕೆ ಕ್ಷೇತ್ರಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.   

ಸುಬ್ರಹ್ಮಣ್ಯ: ತಮಿಳು ಚಿತ್ರನಟ ವಿಶಾಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ರಾತ್ರಿ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ದೇವರ ಮಹಾಪೂಜೆ ಹಾಗೂ ದೇವರ ಹೊರಾಂಗಣ ಉತ್ಸವದಲ್ಲಿ ಪಾಲ್ಗೊಂಡರು. ಶುಕ್ರವಾರ ರಾತ್ರಿ ಕ್ಷೇತ್ರದಲ್ಲಿ ತಂಗಿದ್ದ ಅವರು ಶನಿವಾರ ಮುಂಜಾನೆ ಆಶ್ಲೇಷ ಬಲಿ ಹಾಗೂ ಮಧ್ಯಾಹ್ನದ ಮಹಾಪೂಜೆ ಸೇವೆ ನೆರವೇರಿಸಿದರು.

ಸ್ನೇಹಿತರೊಂದಿಗೆ ಧರ್ಮಸ್ಥಳಕ್ಕೆ ಬಂದಿದ್ದ ಅವರು ಶುಕ್ರವಾರ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಭೇಟಿ ನೀಡಿದರು. ವಿಶಾಲ್ ಅವರನ್ನು ದೇವಳದ ವತಿಯಿಂದ ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ADVERTISEMENT

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯ ಪ್ರಸನ್ನ ದರ್ಬೆ, ಶಿಷ್ಟಾಚಾರ ವಿಭಾಗ ಪ್ರಮೋದ್‌ ಕುಮಾರ್ ಇದ್ದರು.

ಪತ್ರಕರ್ತರ ಪ್ರಶ್ನೆಗೆ ವಿಶಾಲ್ ಯಾವುದೇ ಪ್ರತಿಕ್ರಿಯೆ ನೀಡದೆ, ‘ನಾನು ಕ್ಷೇತ್ರಕ್ಕೆ ದೇವರ ಸೇವೆಗೆ ಬಂದಿದ್ದೇನೆ. ಈ ಸಮಯದಲ್ಲಿ ಮಾತನಾಡುವುದು ಸರಿಯಲ್ಲ. ಬೇಕೆಂದರೆ ಫೋಟೋ ಅಥವಾ ವಿಡಿಯೋವನ್ನು ತೆಗೆದುಕೊಳ್ಳಿ’ ಎಂದು ಹೇಳಿದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜತೆ ಸೆಲ್ಫಿ, ಫೋಟೊ ತೆಗೆಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.