ADVERTISEMENT

ಜೀವ ಬೆದರಿಕೆ: ನಟ ಶಾರುಖ್‌ ಖಾನ್‌ಗೆ ‘ವೈ ಪ್ಲಸ್’ ಭದ್ರತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2023, 4:22 IST
Last Updated 9 ಅಕ್ಟೋಬರ್ 2023, 4:22 IST
<div class="paragraphs"><p>ಬಾಲಿವುಡ್‌ ನಟ ಶಾರುಖ್‌ ಖಾನ್‌</p></div>

ಬಾಲಿವುಡ್‌ ನಟ ಶಾರುಖ್‌ ಖಾನ್‌

   

ಮುಂಬೈ: ಜೀವ ಬೆದರಿಕೆ ಹಿನ್ನೆಲೆ ಬಾಲಿವುಡ್‌ ನಟ ಶಾರುಖ್‌ ಖಾನ್ ಅವರಿಗೆ ಮಹಾರಾಷ್ಟ್ರ ಸರ್ಕಾರ ‘ವೈ ಪ್ಲಸ್‌’ ಶ್ರೇಣಿಯ ಭದ್ರತೆ ನೀಡಿದೆ ಎಂದು ತಿಳಿದುಬಂದಿದೆ.

'ಪಠಾಣ್' ಮತ್ತು 'ಜವಾನ್' ಚಿತ್ರಗಳ ನಂತರ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಾರುಖ್ ಖಾನ್, ರಾಜ್ಯ ಸರ್ಕಾರಕ್ಕೆ ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ

ADVERTISEMENT

ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದ ಹಿನ್ನೆಲೆ ನಟ ಸಲ್ಮಾನ್‌ ಖಾನ್‌ ಅವರಿಗೂ ವೈ ಪ್ಲಸ್‌ ಭದ್ರತೆ ನೀಡಲಾಗಿತ್ತು. ನಟಿ ಕಂಗಾನ ರನೌತ್ ಅವರಿಗೂ ಈ ಭದ್ರತೆ ನೀಡಲಾಗಿತ್ತು. ಉಳಿದಂತೆ ಅಮಿತಾಬ್ ಬಚ್ಚನ್, ಅಮೀರ್ ಖಾನ್, ಅಕ್ಷಯ್ ಕುಮಾರ್ ಮತ್ತು ಅನುಪಮ್ ಖೇರ್ ಅವರು ‘ಎಕ್ಸ್‌’ ಶ್ರೇಣಿಯ ಭದ್ರತೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.