ADVERTISEMENT

ಈ ವಾರ ತೆರೆಗೆ: ಮಹಿಷಾಸುರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:30 IST
Last Updated 7 ಜನವರಿ 2021, 19:30 IST
ಮಹಿಷಾಸುರ ಚಿತ್ರದಲ್ಲಿ ಬಿಂದು
ಮಹಿಷಾಸುರ ಚಿತ್ರದಲ್ಲಿ ಬಿಂದು   

ಮೇಲುಕೋಟೆ ಟೂರಿಂಗ್ ಟಾಕೀಸ್ ಸಂಸ್ಥೆಯಡಿ ಪಾರ್ವತಿ ಚಂದ್ರಶೇಖರ್, ಲೀಲಾವತಿ ಸುರೇಶ್ ಕುಮಾರ್ ಹಾಗೂ ಪ್ರೇಮ ಚಂದ್ರಯ್ಯ ನಿರ್ಮಿಸಿರುವ ‘ಮಹಿಷಾಸುರ’ ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರವನ್ನು ಉದಯ ಪ್ರಸನ್ನ ನಿರ್ದೇಶನ ಮಾಡಿದ್ದಾರೆ. ಮನುಷ್ಯ ಒಳ್ಳೆಯವನೇ ಆಗಿದ್ದರೂ ಆತ ತನ್ನ ತಾಳ್ಮೆ ಕಳೆದುಕೊಂಡರೆ ಮಹಿಷಾಸುರನಾಗುತ್ತಾನೆ ಎಂದು ಹೇಳುವ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಈ ಚಿತ್ರಕ್ಕೆ ಯು/ಎ ಅರ್ಹತಾ ಪ್ರಮಾಣ ಪತ್ರ ಸಿಕ್ಕಿದೆ.

ಅರ್ಜುನ, ರಾಜ್ ಮಂಜು, ಸುದರ್ಶನ್, ಬಿಂದುಶ್ರೀ ಮುಂತಾದವರ ತಾರಾಬಳಗವಿದೆ. ಚಿತ್ರಕ್ಕೆ ಕೃಷ್ಣ ಛಾಯಾಗ್ರಹಣ, ಸುನೀಲ್ ಕಾಶಿ ಸಂಗೀತ, ವೇಣು ಸಾಹಿತ್ಯವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.