ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನು ನಾಯಕನಾಗಿ ನಟಿಸಿರುವ ‘ಮುಗಿಲ್ ಪೇಟೆ’ ಚಿತ್ರ ದೀಪಾವಳಿ ವೇಳೆಗೆ ತೆರೆಗೆ ಬರಲಿದೆ.
‘ಮುಗಿಲ್ ಪೇಟೆ’ ಅದ್ದೂರಿಯಾಗಿ ಮೂಡಿಬಂದಿದ್ದು, ಸಿನಿರಸಿಕರಿಗೆ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಲಿದೆ ಎಂದಿದೆ ಚಿತ್ರತಂಡ.
ಮನು ಅವರಿಗೆ ನಾಯಕಿಯಾಗಿ ಕಯಾದು ಲೋಹರ್ ನಟಿಸಿದ್ದಾರೆ. ರಿಷಿ, ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು ಹೀಗೆ ಹೆಸರಾಂತ ಕಲಾವಿದರು ‘ಮುಗಿಲ್ ಪೇಟೆ’ಯಲ್ಲಿ ಅಭಿನಯಿಸಿದ್ದಾರೆ.
ಭರತ್ ಎಸ್. ನಾವುಂದ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿದ್ದಾರೆ. ಈ ಹಿಂದೆ ‘ಅಡಚಣೆಗಾಗಿ ಕ್ಷಮಿಸಿ’ ಚಿತ್ರ ನಿರ್ದೇಶಿಸಿದ್ದ ಭರತ್ ಅವರಿಗೆ ಇದು ಎರಡನೇ ಚಿತ್ರ.
ಆರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡಿದ್ದಾರೆ. ರವಿವರ್ಮ (ಗಂಗು) ಅವರ ಛಾಯಾಗ್ರಹಣ ಇದೆ.
ಅರ್ಜುನ್ ಕಿಟ್ಟು ಸಂಕಲನ, ಡಾ.ರವಿವರ್ಮ, ವಿಜಯ್ ಸಾಹಸ ನಿರ್ದೇಶನ, ಹರ್ಷ, ಮುರಳಿ, ಮೋಹನ್ ನೃತ್ಯ ನಿರ್ದೇಶನ, ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಹನುಮಂತು ನಿರ್ಮಾಣ ನಿರ್ವಾಹಕರು .
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.